Advertisement
MIRROR FOCUS

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆ | ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ | ಹೊನ್ನಾವರದ ಭಾಸ್ಕೇರಿ ಬಳಿ ಗುಡ್ಡ ಕುಸಿತ | ಮುಂದುವರಿದ ಮಳೆ |

Share

ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡ  ಜಿಲ್ಲೆಯಾದ್ಯಂತ ನಿರಂತರ ಮಳೆ  ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎರಡನೇ ದಿನವೂ ದ ಕ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಹಲವು ಕಡೆ ನದಿ-ಹೊಳೆಗಳು ತುಂಬಿ ಹರಿಯುತ್ತಿದೆ.

ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ  ಸ್ನಾನ ಘಟ್ಟ ಮುಳುಗಿದೆ. ತುಂಬಿ ಹರಿಯುತ್ತಿರುವುದರಿಂದ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ದೇವಸ್ಥಾದ ವತಿಯಿಂದ ಸೂಚನೆ ನೀಡಲಾಗಿದೆ.

ಮಣ್ಣಿನ ದಿಬ್ಬ ಕುಸಿತ: ಪುತ್ತೂರಿನಲ್ಲಿ ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಪಾರಾದ ಘಟನೆ  ನಸುಕಿನ‌ ಜಾವ ನಡೆದಿದೆ. ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಮಜೀದ್ ಎಂಬವರ ಮನೆಗೆ ಪಕ್ಕದ ಮಣ್ಣಿನ ದಿಬ್ಬ ಕುಸಿದು ಬಿದ್ದಿದೆ.

ಉತ್ತರ ಕನ್ನಡ  ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು ಹೊನ್ನಾವರದ  ಭಾಸ್ಕೇರಿ ಬಳಿ ಗುಡ್ಡ ಕುಸಿದಿದೆ. ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್‌ ಆಗಿದೆ. ಹೊನ್ನಾವರ -ಸಾಗರ-ಬೆಂಗಳೂರು ಮಾರ್ಗ ಬಂದ್ ಆಗಿದ್ದು ಬಸ್ ಹಾಗೂ ಭಾರೀ ಗಾತ್ರದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತದಂತಹ ಸಣ್ಣಪುಟ್ಟ ಘಟನೆಗಳು ನಡೆದಿವೆ. ಕೆಲವು ಕಡೆ ಕೃಷಿ ಭೂಮಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ. ಬರೆ ಕುಸಿತದಂತಹ ಘಟನೆಗಳಿಂದ ಕೃಷಿ ಭೂಮಿಗೆ ನೀರು ಹರಿದಿದೆ.

  • ಅಂತರ್ಜಾಲ ಮಾಹಿತಿ

Due to heavy rains in the weatern ghat region, schools and colleges in the district have been declared closed for the second day in a row. This decision comes in response to ongoing heavy rainfall throughout the Dakshina Kannada district.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

4 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

17 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

21 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago