Advertisement
MIRROR FOCUS

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆ | ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ | ಹೊನ್ನಾವರದ ಭಾಸ್ಕೇರಿ ಬಳಿ ಗುಡ್ಡ ಕುಸಿತ | ಮುಂದುವರಿದ ಮಳೆ |

Share

ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡ  ಜಿಲ್ಲೆಯಾದ್ಯಂತ ನಿರಂತರ ಮಳೆ  ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎರಡನೇ ದಿನವೂ ದ ಕ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಹಲವು ಕಡೆ ನದಿ-ಹೊಳೆಗಳು ತುಂಬಿ ಹರಿಯುತ್ತಿದೆ.

ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ  ಸ್ನಾನ ಘಟ್ಟ ಮುಳುಗಿದೆ. ತುಂಬಿ ಹರಿಯುತ್ತಿರುವುದರಿಂದ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ದೇವಸ್ಥಾದ ವತಿಯಿಂದ ಸೂಚನೆ ನೀಡಲಾಗಿದೆ.

ಮಣ್ಣಿನ ದಿಬ್ಬ ಕುಸಿತ: ಪುತ್ತೂರಿನಲ್ಲಿ ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಪಾರಾದ ಘಟನೆ  ನಸುಕಿನ‌ ಜಾವ ನಡೆದಿದೆ. ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಮಜೀದ್ ಎಂಬವರ ಮನೆಗೆ ಪಕ್ಕದ ಮಣ್ಣಿನ ದಿಬ್ಬ ಕುಸಿದು ಬಿದ್ದಿದೆ.

ಉತ್ತರ ಕನ್ನಡ  ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು ಹೊನ್ನಾವರದ  ಭಾಸ್ಕೇರಿ ಬಳಿ ಗುಡ್ಡ ಕುಸಿದಿದೆ. ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್‌ ಆಗಿದೆ. ಹೊನ್ನಾವರ -ಸಾಗರ-ಬೆಂಗಳೂರು ಮಾರ್ಗ ಬಂದ್ ಆಗಿದ್ದು ಬಸ್ ಹಾಗೂ ಭಾರೀ ಗಾತ್ರದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತದಂತಹ ಸಣ್ಣಪುಟ್ಟ ಘಟನೆಗಳು ನಡೆದಿವೆ. ಕೆಲವು ಕಡೆ ಕೃಷಿ ಭೂಮಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ. ಬರೆ ಕುಸಿತದಂತಹ ಘಟನೆಗಳಿಂದ ಕೃಷಿ ಭೂಮಿಗೆ ನೀರು ಹರಿದಿದೆ.

  • ಅಂತರ್ಜಾಲ ಮಾಹಿತಿ

Due to heavy rains in the weatern ghat region, schools and colleges in the district have been declared closed for the second day in a row. This decision comes in response to ongoing heavy rainfall throughout the Dakshina Kannada district.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

10 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

18 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago