Advertisement
MIRROR FOCUS

ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಒಣಗಿದ ಮೆಕ್ಕೆಜೋಳದ ಬೆಳೆ

Share

ದಾವಣಗೆರೆ(Davangere) ಜಿಲ್ಲೆಯ ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಸಮರ್ಪಕ ಮಳೆ(Rain) ಬಾರದ ಕಾರಣ ತಾಲೂಕಿನ ಮಾವಿನಕಟ್ಟೆ, ಚನ್ನೇಶಪುರ, ದಿಗ್ಗೇನಹಳ್ಳಿ, ಮಲ್ಲಿಗೆರೆ ಲಕ್ಷ್ಮೀಸಾಗರ, ಹೊದಿಗೆರೆ, ಬೆಂಕಿಕೆರೆ ಸೇರಿದಂತೆ ದೇವರಹಳ್ಳಿ, ಸಂತೆಬೆನ್ನೂರು, ಕಸಬಾ ಹೋಬಳಿಯ ಭಾಗಗಳಲ್ಲಿ ರೈತರ(farmer) ಆಶಾದಾಯಕ ಬೆಳೆಯಾದ ಮೆಕ್ಕೇಜೋಳ(maize) ಸಂಪೂರ್ಣ ಒಣಗಿ ಹೋಗಿದ್ದು ರೈತರು ಕಂಗಾಲಾಗಿದ್ದಾರೆ.

Advertisement
Advertisement

ಚನ್ನಗಿರಿ ತಾಲೂಕು ಸಂಪೂರ್ಣ ಅಡಿಕೆಮಯವಾಗಿದ್ದರೂ, ರೈತರು ದನಕರುಗಳಿಗೆ ಮತ್ತು ಸಾಕಷ್ಟು ಮಧ್ಯಮ ರೈತರ ಆರ್ಥಿಕ ಸಂಕಷ್ಟವನ್ನು ದೂರ ಮಾಡುವ ಬೆಳೆಯೆಂದರೆ ಮೆಕ್ಕೇಜೋಳ. ಪ್ರತಿವರ್ಷವೂ ಮೆಕ್ಕೇಜೋಳ ಬೆಳೆಯು ಅಕ್ಟೋಬರ್ ತಿಂಗಳ ಅಂತ್ಯ ಮತ್ತು ನವೆಂಬರ್ ತಿಂಗಳ ಮೊದಲನೇ ವಾರದಲ್ಲಿ ರೈತರ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿ ಬಹುತೇಕ ಕಟಾವು ಆಗಬೇಕಿತ್ತು. ಆದರೆ ವಾಡಿಕೆ ಮಳೆ ಕಡಿಮೆಯಾಗಿ ತೇವಾಂಶ ಕೊರತೆಯಾದ ಹಿನ್ನಲೆಯಲ್ಲಿ ಸಂಪೂರ್ಣ ಮೆಕ್ಕೇಜೋಳ ಮತ್ತು ಇತರೇ ಬೆಳೆಗಳಾದ ರಾಗಿ, ತೊಗರಿ ಮತ್ತು ಹತ್ತಿ ಬೆಳೆಗಳು ಸಂಪೂರ್ಣ ನೆಲಕಚ್ಚಿವೆ.

ಇದರಿಂದ ರೈತ ಮಾತ್ರವಲ್ಲದೇ ಮೆಕ್ಕೇಜೋಳವನ್ನು ತಿನ್ನುವ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿದ್ದ ಗಿಳಿ ಮತ್ತು ಇತರೇ ಪಕ್ಷಿಗಳಿಗೂ ಅಹಾರವಿಲ್ಲದಂತೆ ಆಗಿದೆ. ಇದರಿಂದ ಮನನೊಂದ ರೈತರು ತಮ್ಮ ಹೊಲಗಳಿಗೆ ಹೋಗುವುದನ್ನು ಬಿಟ್ಟಿದ್ದು ಅಲ್ಪಸ್ವಲ್ಪ ಉಳಿದಿರುವಂತಹ ಹಸಿ ಮೆಕ್ಕೇಜೋಳವನ್ನು ಕಿತ್ತು ಬೇಯಿಸಿ ಮಾರಾಟ ಮಾಡುವ ಮಾರಾಟಗಾರರಿಗೆ ನೀಡಲು ಮುಂದಾಗಿದ್ದಾರೆ. ಮತ್ತು ಕೆಲವು ಕಡೆಗಳಲ್ಲಿ ರೈತರು ಹಾಳದ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನೆಲಸಮ ಮಾಡುತ್ತಿದ್ದಾರೆ. ಕೃಷಿ ಇಲಾಖೆಯು ತಾಲೂಕಿನ ಬರಗಾಲದ ಕುರಿತು ಸರಕಾರಕ್ಕೆ ಈಗಾಗಲೇ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದು ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ.

ಈ ಬಾರಿ ರೈತರು ಕಳೆದ ಬಾರಿ ಚನ್ನಗಿರಿ ತಾಲೂಕಿನಲ್ಲಿ 22600 ಹೆಕೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿ ಕನಿಷ್ಟ ಒಂದು ಎಕೆರೆಗೆ 20 ಕ್ವಿಂಟಾಲ್ ಇಳುವರಿ ಪಡೆದಿದ್ದರು. ಆದರೆ ಈ ಬಾರಿ 24960 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೇಜೋಳ ಬಿತ್ತನೆ ಮಾಡಲಾಗಿದ್ದು ಒಂದು ಎಕೆರೆಗೆ 18 ಕ್ವಿಂಟಾಲ್‌ರವರೆಗೂ ನಿರೀಕ್ಷೆ ಇದ್ದು ಈ ಬಾರಿ ರೈತನಿಗೆ ಒಂದು ಎಕೆರೆಗೆ 3 ಕ್ವಿಂಟಾಲ್ ಮೆಕ್ಕೇಜೋಳಸಹ ದೊರಕದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬಾರಿ ರಾಗಿ 2600 ಹೆಕ್ಟೇರ್, ತೊಗರಿ 1180 ಹೆಕ್ಕೇರ್, ಹತ್ತಿ 40 ಹೆಕ್ಖೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದು ಬಿತ್ತನೆಯಲ್ಲಿ ನಿಗದಿತ ಗುರಿಯನ್ನು ತಲುಪಲಾಗಿದ್ದರೂ ಬೆಳೆಯ ಇಳುವರಿ ಬಾರದೇ ರೈತನ ಕೂಲಿಯು ದೊರಕದಂತಾಗಿದೆ. ಕಳೆದ ಬಾರಿ ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಮೆಕ್ಕೇಜೋಳವು ಕಟಾವನ್ನು ಮಾಡಲಾಗಿದ್ದು ಈ ಬಾರಿ ಮತ್ತೆ ಮಳೆ ಬಂದರೂ ಸಹ ಬೆಳೆಯನ್ನು ನಿರೀಕ್ಷಿಸದಂತಹ ಬೆಳೆಯನ್ನು ನಿರೀಕ್ಷಿಸಲು ಸಾಧ್ಯವಾಗದಂತೆ ಅಗಿದೆ. ವಾಡಿಕೆ ಮಳೆ 692 ಮಿ.ಮೀ ಇದ್ದು ಕಳೆದ ಸಾಲಿನಲ್ಲಿ 980ಮಿ.ಮೀ. ಮಳೆಯಾಗಿದ್ದು ಈ ಬಾರಿ 410 ಮಿ.ಮೀ. ಮಳೆಯಾಗಿದ್ದು ಶೇ 60 ರಷ್ಟು ಮಳೆಯ ಕೊರತೆ ಉಂಟಾಗಿದೆ ಪರಿಣಾಮ ಬೆಳೆಗಳಲ್ಲಿ ಸಂಪೂರ್ಣ ತೇವಾಂಶ ಕಡಿಮೆಯಾಗಿದೆ.

Due to lack of rain in Channagiri taluk of Davangere district, Mavinakatte, Channeshpur, Diggenahalli, Malligere, Lakshmisaagara, Hodigere, Benkkikere, Devarahalli, Santebennur, Kasaba Hobali parts of the taluk, the promising crop of farmers, maize has completely dried up. Confused.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

19 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago