Advertisement
MIRROR FOCUS

ರಾಜ್ಯದಲ್ಲಿ ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ| ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ..!

Share

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣ (Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ. ಆದರೆ ಉತ್ತರ ಕರ್ನಾಟಕದ(North KArnataka) ಕೆಲ ಜಿಲ್ಲೆಗಳಲ್ಲಿ ಇನ್ನು ಮಳೆರಾಯ ಕೃಪೆ ತೋರಿಲ್ಲ. ಅಣೆಕಟ್ಟುಗಳಲ್ಲಿ(Dam) ನೀರು ಪಾತಾಳ ಸೇರುತ್ತಿದೆ. ಕೃಷಿಗೆ(Agriculture) ಮಾತ್ರವಲ್ಲದೆ ಜನ-ಜಾನುವಾರುಗಳಗೂ(Cattle) ನೀರಿಲ್ಲದಂತಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ತುಂಗಭದ್ರಾ ನದಿಗೆ (TungaBhadra River) ಅಡ್ಡಲಾಗಿ ತುಂಗಭದ್ರಾ ಜಲಾಶಯವನ್ನು(TungaBhadra Dam) ನಿರ್ಮಾಣ ಮಾಡಲಾಗಿದೆ. ಇದೀಗ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್(Dead storage) ತಲುಪಿದೆ.

ತುಂಗಭದ್ರಾ ಜಲಾಶಯದ ನೀರಿನ ಮೇಲೆಯೇ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಹಕ್ಕಿದ್ದು, ಈ ಡ್ಯಾಂನಲ್ಲಿರುವ ನೀರು, ರಾಜ್ಯದ ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಮತ್ತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಅನೇಕ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಪ್ರಮುಖ ನೀರಿನ ಮೂಲವಾಗಿದೆ. ಆದರೆ 105.79 ಟಿಎಂಸಿ ನೀರು ಸಾಮಾರ್ಥ್ಯದ ಈ ಡ್ಯಾಂ ನಲ್ಲಿ ಸದ್ಯ ಇರೋ ನೀರಿನ ಪ್ರಮಾಣ ಕೇವಲ 3.40 TMC ಮಾತ್ರ. ಅಂದ್ರೆ ಡ್ಯಾಂನ ಒಟ್ಟು ನೀರು ಸಂಗ್ರಹ ಸಾಮಾರ್ಥ್ಯದ 3% ರಷ್ಟು ಮಾತ್ರ ನೀರು ಸದ್ಯ ಡ್ಯಾಂನಲ್ಲಿದೆ.

ಒಂದು ಡ್ಯಾಂನಲ್ಲಿ ಕನಿಷ್ಟ 4 ಟಿಎಂಸಿ ನೀರು ಸಂಗ್ರಹವಿರಬೇಕು ಅನ್ನೋ ನಿಯಮವಿದೆ. ಯಾಕಂದ್ರೆ ಡ್ಯಾಂ ನಲ್ಲಿರುವ ಜಲಚರಗಳು ಮತ್ತು ನದಿಯಲ್ಲಿರುವ ಜಲಚರಗಳು ಬದುಕಬೇಕಾದ್ರೆ ಇಷ್ಟೊಂದು ಪ್ರಮಾಣದ ನೀರನ್ನು ಇಟ್ಟುಕೊಳ್ಳಲೇಬೇಕು. ಆದರೆ ತುಂಗಭದ್ರಾ ಜಲಾಶಯದಲ್ಲಿ ಸದ್ಯ ಇರೋದು ಕೇವಲ 3.40 ಟಿಎಂಸಿ ನೀರು ಮಾತ್ರ.

ಕಳೆದ ವರ್ಷ ಇದೇ ಸಮಯದಲ್ಲಿ ಡ್ಯಾಂನಲ್ಲಿ 3.72 ಟಿಎಂಸಿ ನೀರು ಇತ್ತು. ಅಲ್ಲದೇ ಇದೇ ಸಮಯದಲ್ಲಿ ಡ್ಯಾಂ ಗೆ ನೀರಿನ ಒಳಹರಿವು ಆರಂಭವಾಗಿತ್ತು. ಹೀಗಾಗಿ ಡ್ಯಾಂ ನಲ್ಲಿ ನೀರಿನ ಸಂಗ್ರಹ ಆರಂಭವಾಗಿತ್ತು. ಈ ವರ್ಷ ಡ್ಯಾಂಗೆ ಕಳೆದ ಏಳು ತಿಂಗಳಿಂದ ಒಳ ಹರಿವು ಬಂದಾಗಿದೆ. ಡ್ಯಾಂ ನಲ್ಲಿರುವ ನೀರನ್ನು ಈಗಾಗಲೇ ಕೃಷಿ ಸೇರಿದಂತೆ ಕುಡಿಯುವ ನೀರಿಗೆ ಬಿಟ್ಟಿದ್ದರಿಂದ ಸದ್ಯ ಡ್ಯಾಂನಲ್ಲಿ ಕೇವಲ 3.40 ಟಿಎಂಸಿ ನೀರು ಮಾತ್ರ ಇದೆ. ಅದರಲ್ಲಿ ಡೆಡ್ ಸ್ಟೋರೆಜ್ ಇರೋದು ಎರಡು ಟಿಎಂಸಿ ನೀರು. ಬಳಕೆಗೆ ಬರೋದು ಕೇವಲ 1.40 ಟಿಎಂಸಿ ನೀರು ಮಾತ್ರವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago