Advertisement
MIRROR FOCUS

ರಾಜ್ಯದಲ್ಲಿ ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ| ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ..!

Share

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣ (Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ. ಆದರೆ ಉತ್ತರ ಕರ್ನಾಟಕದ(North KArnataka) ಕೆಲ ಜಿಲ್ಲೆಗಳಲ್ಲಿ ಇನ್ನು ಮಳೆರಾಯ ಕೃಪೆ ತೋರಿಲ್ಲ. ಅಣೆಕಟ್ಟುಗಳಲ್ಲಿ(Dam) ನೀರು ಪಾತಾಳ ಸೇರುತ್ತಿದೆ. ಕೃಷಿಗೆ(Agriculture) ಮಾತ್ರವಲ್ಲದೆ ಜನ-ಜಾನುವಾರುಗಳಗೂ(Cattle) ನೀರಿಲ್ಲದಂತಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ತುಂಗಭದ್ರಾ ನದಿಗೆ (TungaBhadra River) ಅಡ್ಡಲಾಗಿ ತುಂಗಭದ್ರಾ ಜಲಾಶಯವನ್ನು(TungaBhadra Dam) ನಿರ್ಮಾಣ ಮಾಡಲಾಗಿದೆ. ಇದೀಗ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್(Dead storage) ತಲುಪಿದೆ.

ತುಂಗಭದ್ರಾ ಜಲಾಶಯದ ನೀರಿನ ಮೇಲೆಯೇ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಹಕ್ಕಿದ್ದು, ಈ ಡ್ಯಾಂನಲ್ಲಿರುವ ನೀರು, ರಾಜ್ಯದ ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಮತ್ತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಅನೇಕ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಪ್ರಮುಖ ನೀರಿನ ಮೂಲವಾಗಿದೆ. ಆದರೆ 105.79 ಟಿಎಂಸಿ ನೀರು ಸಾಮಾರ್ಥ್ಯದ ಈ ಡ್ಯಾಂ ನಲ್ಲಿ ಸದ್ಯ ಇರೋ ನೀರಿನ ಪ್ರಮಾಣ ಕೇವಲ 3.40 TMC ಮಾತ್ರ. ಅಂದ್ರೆ ಡ್ಯಾಂನ ಒಟ್ಟು ನೀರು ಸಂಗ್ರಹ ಸಾಮಾರ್ಥ್ಯದ 3% ರಷ್ಟು ಮಾತ್ರ ನೀರು ಸದ್ಯ ಡ್ಯಾಂನಲ್ಲಿದೆ.

ಒಂದು ಡ್ಯಾಂನಲ್ಲಿ ಕನಿಷ್ಟ 4 ಟಿಎಂಸಿ ನೀರು ಸಂಗ್ರಹವಿರಬೇಕು ಅನ್ನೋ ನಿಯಮವಿದೆ. ಯಾಕಂದ್ರೆ ಡ್ಯಾಂ ನಲ್ಲಿರುವ ಜಲಚರಗಳು ಮತ್ತು ನದಿಯಲ್ಲಿರುವ ಜಲಚರಗಳು ಬದುಕಬೇಕಾದ್ರೆ ಇಷ್ಟೊಂದು ಪ್ರಮಾಣದ ನೀರನ್ನು ಇಟ್ಟುಕೊಳ್ಳಲೇಬೇಕು. ಆದರೆ ತುಂಗಭದ್ರಾ ಜಲಾಶಯದಲ್ಲಿ ಸದ್ಯ ಇರೋದು ಕೇವಲ 3.40 ಟಿಎಂಸಿ ನೀರು ಮಾತ್ರ.

ಕಳೆದ ವರ್ಷ ಇದೇ ಸಮಯದಲ್ಲಿ ಡ್ಯಾಂನಲ್ಲಿ 3.72 ಟಿಎಂಸಿ ನೀರು ಇತ್ತು. ಅಲ್ಲದೇ ಇದೇ ಸಮಯದಲ್ಲಿ ಡ್ಯಾಂ ಗೆ ನೀರಿನ ಒಳಹರಿವು ಆರಂಭವಾಗಿತ್ತು. ಹೀಗಾಗಿ ಡ್ಯಾಂ ನಲ್ಲಿ ನೀರಿನ ಸಂಗ್ರಹ ಆರಂಭವಾಗಿತ್ತು. ಈ ವರ್ಷ ಡ್ಯಾಂಗೆ ಕಳೆದ ಏಳು ತಿಂಗಳಿಂದ ಒಳ ಹರಿವು ಬಂದಾಗಿದೆ. ಡ್ಯಾಂ ನಲ್ಲಿರುವ ನೀರನ್ನು ಈಗಾಗಲೇ ಕೃಷಿ ಸೇರಿದಂತೆ ಕುಡಿಯುವ ನೀರಿಗೆ ಬಿಟ್ಟಿದ್ದರಿಂದ ಸದ್ಯ ಡ್ಯಾಂನಲ್ಲಿ ಕೇವಲ 3.40 ಟಿಎಂಸಿ ನೀರು ಮಾತ್ರ ಇದೆ. ಅದರಲ್ಲಿ ಡೆಡ್ ಸ್ಟೋರೆಜ್ ಇರೋದು ಎರಡು ಟಿಎಂಸಿ ನೀರು. ಬಳಕೆಗೆ ಬರೋದು ಕೇವಲ 1.40 ಟಿಎಂಸಿ ನೀರು ಮಾತ್ರವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

15 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

15 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago