ಮಳೆಗಾಲದ ಸರ್ವೆ ಸಾಮಾನ್ಯ ಸಮಸ್ಯೆ ಇದು. ಮಳೆ ಜೋರಾಗುತ್ತಿದ್ದಂತೆ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಿಗೆ ಹೋಗುವ ಘಾಟ್ ಗಳು ಕುಸಿತ ಕಾಣೋದು, ಕಾಮಗಾರಿ ಚಾಲನೆ ನೀಡೋದು ಸಾಮಾನ್ಯ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ #HeavyRain ಕಾರಣ ಚಾರ್ಮಾಡಿ #Charmadi ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಗುಡ್ಡ ಕುಸಿತವಾಗಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ಘನ ವಾಹನಗಳ ಓಡಾಟ ನಿಷೇಧಕ್ಕೆ ಚಿಂತನೆ ಆರಂಭವಾಗಿದೆ. ಗಾಳಿ-ಮಳೆಗೆ ಗುಡ್ಡ ಕುಸಿತವಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿಯೂ ಎದುರಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲೆಡೆ ಜಲಪಾತಗಳು ತುಂಬಿ ಹರಿಯುತ್ತಿವೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಕೂಲ್ ಡಿಸ್ಟ್ರಿಕ್ಟ್ ಈಗ ಜಲಪಾತಗಳ ನಾಡಾಗಿದೆ. ಮಲೆನಾಡಿನಾದ್ಯಂತ ನೂರಾರು ಜಲಪಾತಗಳ ಸಮಾಗಮವಾಗಿದೆ. ಅದಕ್ಕೆ ಆ ಸೌಂದರ್ಯ ಕಣ್ತುಂಬಿಕೊಳ್ಳಲು ಅಲ್ಲಿಗೆ ಜನ ಟ್ರಿಪ್ ಹೋಗ್ತಾ ಇದ್ದಾರೆ. ಕರ್ನಾಟಕದ ಹಲವು ಪ್ರದೇಶಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಪ್ರವಾಹದ ಆತಂಕವೂ ಎದುರಾಗಿದೆ.
ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ…
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…
ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ ಕ್ಷೇತ್ರದಲ್ಲಿ…
ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…