ಮಳೆಗಾಲದ ಸರ್ವೆ ಸಾಮಾನ್ಯ ಸಮಸ್ಯೆ ಇದು. ಮಳೆ ಜೋರಾಗುತ್ತಿದ್ದಂತೆ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಿಗೆ ಹೋಗುವ ಘಾಟ್ ಗಳು ಕುಸಿತ ಕಾಣೋದು, ಕಾಮಗಾರಿ ಚಾಲನೆ ನೀಡೋದು ಸಾಮಾನ್ಯ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ #HeavyRain ಕಾರಣ ಚಾರ್ಮಾಡಿ #Charmadi ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಗುಡ್ಡ ಕುಸಿತವಾಗಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ಘನ ವಾಹನಗಳ ಓಡಾಟ ನಿಷೇಧಕ್ಕೆ ಚಿಂತನೆ ಆರಂಭವಾಗಿದೆ. ಗಾಳಿ-ಮಳೆಗೆ ಗುಡ್ಡ ಕುಸಿತವಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿಯೂ ಎದುರಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲೆಡೆ ಜಲಪಾತಗಳು ತುಂಬಿ ಹರಿಯುತ್ತಿವೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಕೂಲ್ ಡಿಸ್ಟ್ರಿಕ್ಟ್ ಈಗ ಜಲಪಾತಗಳ ನಾಡಾಗಿದೆ. ಮಲೆನಾಡಿನಾದ್ಯಂತ ನೂರಾರು ಜಲಪಾತಗಳ ಸಮಾಗಮವಾಗಿದೆ. ಅದಕ್ಕೆ ಆ ಸೌಂದರ್ಯ ಕಣ್ತುಂಬಿಕೊಳ್ಳಲು ಅಲ್ಲಿಗೆ ಜನ ಟ್ರಿಪ್ ಹೋಗ್ತಾ ಇದ್ದಾರೆ. ಕರ್ನಾಟಕದ ಹಲವು ಪ್ರದೇಶಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಪ್ರವಾಹದ ಆತಂಕವೂ ಎದುರಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…