ಮಳೆಗಾಲದ ಸರ್ವೆ ಸಾಮಾನ್ಯ ಸಮಸ್ಯೆ ಇದು. ಮಳೆ ಜೋರಾಗುತ್ತಿದ್ದಂತೆ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಿಗೆ ಹೋಗುವ ಘಾಟ್ ಗಳು ಕುಸಿತ ಕಾಣೋದು, ಕಾಮಗಾರಿ ಚಾಲನೆ ನೀಡೋದು ಸಾಮಾನ್ಯ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ #HeavyRain ಕಾರಣ ಚಾರ್ಮಾಡಿ #Charmadi ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಗುಡ್ಡ ಕುಸಿತವಾಗಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ಘನ ವಾಹನಗಳ ಓಡಾಟ ನಿಷೇಧಕ್ಕೆ ಚಿಂತನೆ ಆರಂಭವಾಗಿದೆ. ಗಾಳಿ-ಮಳೆಗೆ ಗುಡ್ಡ ಕುಸಿತವಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿಯೂ ಎದುರಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲೆಡೆ ಜಲಪಾತಗಳು ತುಂಬಿ ಹರಿಯುತ್ತಿವೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಕೂಲ್ ಡಿಸ್ಟ್ರಿಕ್ಟ್ ಈಗ ಜಲಪಾತಗಳ ನಾಡಾಗಿದೆ. ಮಲೆನಾಡಿನಾದ್ಯಂತ ನೂರಾರು ಜಲಪಾತಗಳ ಸಮಾಗಮವಾಗಿದೆ. ಅದಕ್ಕೆ ಆ ಸೌಂದರ್ಯ ಕಣ್ತುಂಬಿಕೊಳ್ಳಲು ಅಲ್ಲಿಗೆ ಜನ ಟ್ರಿಪ್ ಹೋಗ್ತಾ ಇದ್ದಾರೆ. ಕರ್ನಾಟಕದ ಹಲವು ಪ್ರದೇಶಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಪ್ರವಾಹದ ಆತಂಕವೂ ಎದುರಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…