ಮಳೆಗಾಲದ ಸರ್ವೆ ಸಾಮಾನ್ಯ ಸಮಸ್ಯೆ ಇದು. ಮಳೆ ಜೋರಾಗುತ್ತಿದ್ದಂತೆ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಿಗೆ ಹೋಗುವ ಘಾಟ್ ಗಳು ಕುಸಿತ ಕಾಣೋದು, ಕಾಮಗಾರಿ ಚಾಲನೆ ನೀಡೋದು ಸಾಮಾನ್ಯ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ #HeavyRain ಕಾರಣ ಚಾರ್ಮಾಡಿ #Charmadi ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಗುಡ್ಡ ಕುಸಿತವಾಗಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ಘನ ವಾಹನಗಳ ಓಡಾಟ ನಿಷೇಧಕ್ಕೆ ಚಿಂತನೆ ಆರಂಭವಾಗಿದೆ. ಗಾಳಿ-ಮಳೆಗೆ ಗುಡ್ಡ ಕುಸಿತವಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿಯೂ ಎದುರಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲೆಡೆ ಜಲಪಾತಗಳು ತುಂಬಿ ಹರಿಯುತ್ತಿವೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಕೂಲ್ ಡಿಸ್ಟ್ರಿಕ್ಟ್ ಈಗ ಜಲಪಾತಗಳ ನಾಡಾಗಿದೆ. ಮಲೆನಾಡಿನಾದ್ಯಂತ ನೂರಾರು ಜಲಪಾತಗಳ ಸಮಾಗಮವಾಗಿದೆ. ಅದಕ್ಕೆ ಆ ಸೌಂದರ್ಯ ಕಣ್ತುಂಬಿಕೊಳ್ಳಲು ಅಲ್ಲಿಗೆ ಜನ ಟ್ರಿಪ್ ಹೋಗ್ತಾ ಇದ್ದಾರೆ. ಕರ್ನಾಟಕದ ಹಲವು ಪ್ರದೇಶಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಪ್ರವಾಹದ ಆತಂಕವೂ ಎದುರಾಗಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…