ಮಳೆಗಾಲದ ಸರ್ವೆ ಸಾಮಾನ್ಯ ಸಮಸ್ಯೆ ಇದು. ಮಳೆ ಜೋರಾಗುತ್ತಿದ್ದಂತೆ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಿಗೆ ಹೋಗುವ ಘಾಟ್ ಗಳು ಕುಸಿತ ಕಾಣೋದು, ಕಾಮಗಾರಿ ಚಾಲನೆ ನೀಡೋದು ಸಾಮಾನ್ಯ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ #HeavyRain ಕಾರಣ ಚಾರ್ಮಾಡಿ #Charmadi ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಗುಡ್ಡ ಕುಸಿತವಾಗಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ಘನ ವಾಹನಗಳ ಓಡಾಟ ನಿಷೇಧಕ್ಕೆ ಚಿಂತನೆ ಆರಂಭವಾಗಿದೆ. ಗಾಳಿ-ಮಳೆಗೆ ಗುಡ್ಡ ಕುಸಿತವಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿಯೂ ಎದುರಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲೆಡೆ ಜಲಪಾತಗಳು ತುಂಬಿ ಹರಿಯುತ್ತಿವೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಕೂಲ್ ಡಿಸ್ಟ್ರಿಕ್ಟ್ ಈಗ ಜಲಪಾತಗಳ ನಾಡಾಗಿದೆ. ಮಲೆನಾಡಿನಾದ್ಯಂತ ನೂರಾರು ಜಲಪಾತಗಳ ಸಮಾಗಮವಾಗಿದೆ. ಅದಕ್ಕೆ ಆ ಸೌಂದರ್ಯ ಕಣ್ತುಂಬಿಕೊಳ್ಳಲು ಅಲ್ಲಿಗೆ ಜನ ಟ್ರಿಪ್ ಹೋಗ್ತಾ ಇದ್ದಾರೆ. ಕರ್ನಾಟಕದ ಹಲವು ಪ್ರದೇಶಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಪ್ರವಾಹದ ಆತಂಕವೂ ಎದುರಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…