ಮಳೆಗಾಲದ ಸರ್ವೆ ಸಾಮಾನ್ಯ ಸಮಸ್ಯೆ ಇದು. ಮಳೆ ಜೋರಾಗುತ್ತಿದ್ದಂತೆ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಿಗೆ ಹೋಗುವ ಘಾಟ್ ಗಳು ಕುಸಿತ ಕಾಣೋದು, ಕಾಮಗಾರಿ ಚಾಲನೆ ನೀಡೋದು ಸಾಮಾನ್ಯ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ #HeavyRain ಕಾರಣ ಚಾರ್ಮಾಡಿ #Charmadi ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಗುಡ್ಡ ಕುಸಿತವಾಗಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ಘನ ವಾಹನಗಳ ಓಡಾಟ ನಿಷೇಧಕ್ಕೆ ಚಿಂತನೆ ಆರಂಭವಾಗಿದೆ. ಗಾಳಿ-ಮಳೆಗೆ ಗುಡ್ಡ ಕುಸಿತವಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿಯೂ ಎದುರಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲೆಡೆ ಜಲಪಾತಗಳು ತುಂಬಿ ಹರಿಯುತ್ತಿವೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಕೂಲ್ ಡಿಸ್ಟ್ರಿಕ್ಟ್ ಈಗ ಜಲಪಾತಗಳ ನಾಡಾಗಿದೆ. ಮಲೆನಾಡಿನಾದ್ಯಂತ ನೂರಾರು ಜಲಪಾತಗಳ ಸಮಾಗಮವಾಗಿದೆ. ಅದಕ್ಕೆ ಆ ಸೌಂದರ್ಯ ಕಣ್ತುಂಬಿಕೊಳ್ಳಲು ಅಲ್ಲಿಗೆ ಜನ ಟ್ರಿಪ್ ಹೋಗ್ತಾ ಇದ್ದಾರೆ. ಕರ್ನಾಟಕದ ಹಲವು ಪ್ರದೇಶಗಳಲ್ಲಿ ಈಗ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಪ್ರವಾಹದ ಆತಂಕವೂ ಎದುರಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…