ಉತ್ತರ ಪ್ರದೇಶದ ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಸಂಸದರಾದ ಆನಂದ್ ಭದೌರಿಯಾ ಮತ್ತು ಕೆ. ಸುಧಾಕರನ್ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ತ್ರಿವೇಣಿ ಸಂಗಮ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾಗಿದೆ. ಇದರ ನೀರು ಪರಿಶುದ್ಧವಾಗಿರುವುದಾಗಿ ಇದಾಗಲೇ ವರದಿ ಬಂದಿದೆ. ನೀರಿನ ಗುಣಮಟ್ಟದ ನಿಯತಾಂಕಗಳಾದ PH, ಕರಗಿದ ಆಮ್ಲಜನಕ, BOD ಇವುಗಳು ಸ್ನಾನ ಮಾಡಲು ಯೋಗ್ಯ ಎನ್ನುವುದಾಗಿ ತಿಳಿಸಿವೆ ಎಂದರು. 2022-23 ರಿಂದ 2024-25 ರವರೆಗೆ ನದಿ ಶುದ್ಧೀಕರಣಕ್ಕಾಗಿ ‘ರಾಷ್ಟ್ರೀಯ ಗಂಗಾ ಮಿಷನ್ ಫಾರ್ ಕ್ಲೀನ್ ಗಂಗಾ’ ಇದಕ್ಕೆ 7421 ಕೋಟಿ ರೂಪಾಯಿ ಹಂಚಿಕೆ ಮಾಡಿರುವುದಾಗಿ ಅವರು ತಿಳಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…