ಉತ್ತರ ಪ್ರದೇಶದ ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಸಂಸದರಾದ ಆನಂದ್ ಭದೌರಿಯಾ ಮತ್ತು ಕೆ. ಸುಧಾಕರನ್ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ತ್ರಿವೇಣಿ ಸಂಗಮ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾಗಿದೆ. ಇದರ ನೀರು ಪರಿಶುದ್ಧವಾಗಿರುವುದಾಗಿ ಇದಾಗಲೇ ವರದಿ ಬಂದಿದೆ. ನೀರಿನ ಗುಣಮಟ್ಟದ ನಿಯತಾಂಕಗಳಾದ PH, ಕರಗಿದ ಆಮ್ಲಜನಕ, BOD ಇವುಗಳು ಸ್ನಾನ ಮಾಡಲು ಯೋಗ್ಯ ಎನ್ನುವುದಾಗಿ ತಿಳಿಸಿವೆ ಎಂದರು. 2022-23 ರಿಂದ 2024-25 ರವರೆಗೆ ನದಿ ಶುದ್ಧೀಕರಣಕ್ಕಾಗಿ ‘ರಾಷ್ಟ್ರೀಯ ಗಂಗಾ ಮಿಷನ್ ಫಾರ್ ಕ್ಲೀನ್ ಗಂಗಾ’ ಇದಕ್ಕೆ 7421 ಕೋಟಿ ರೂಪಾಯಿ ಹಂಚಿಕೆ ಮಾಡಿರುವುದಾಗಿ ಅವರು ತಿಳಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…