ಉತ್ತರ ಪ್ರದೇಶದ ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಸಂಸದರಾದ ಆನಂದ್ ಭದೌರಿಯಾ ಮತ್ತು ಕೆ. ಸುಧಾಕರನ್ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ತ್ರಿವೇಣಿ ಸಂಗಮ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾಗಿದೆ. ಇದರ ನೀರು ಪರಿಶುದ್ಧವಾಗಿರುವುದಾಗಿ ಇದಾಗಲೇ ವರದಿ ಬಂದಿದೆ. ನೀರಿನ ಗುಣಮಟ್ಟದ ನಿಯತಾಂಕಗಳಾದ PH, ಕರಗಿದ ಆಮ್ಲಜನಕ, BOD ಇವುಗಳು ಸ್ನಾನ ಮಾಡಲು ಯೋಗ್ಯ ಎನ್ನುವುದಾಗಿ ತಿಳಿಸಿವೆ ಎಂದರು. 2022-23 ರಿಂದ 2024-25 ರವರೆಗೆ ನದಿ ಶುದ್ಧೀಕರಣಕ್ಕಾಗಿ ‘ರಾಷ್ಟ್ರೀಯ ಗಂಗಾ ಮಿಷನ್ ಫಾರ್ ಕ್ಲೀನ್ ಗಂಗಾ’ ಇದಕ್ಕೆ 7421 ಕೋಟಿ ರೂಪಾಯಿ ಹಂಚಿಕೆ ಮಾಡಿರುವುದಾಗಿ ಅವರು ತಿಳಿಸಿದರು.
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…