ಹಿಮಾಚಲ ಪ್ರದೇಶದ ಕುಲುವಿನಲ್ಲಿ ಅಂತಾರಾಷ್ಟ್ರೀಯ ದಸರಾ ಹಬ್ಬ, ಸಾಂಪ್ರದಾಯಿಕ ಪದ್ಧತಿಗಳೊಂದಿಗೆ ಆರಂಭವಾಗಿದೆ.ಈ ಸಂದರ್ಭದಲ್ಲಿ, ಐತಿಹಾಸಿಕ ಧಾಲ್ಪುರ ಮೈದಾನದಲ್ಲಿ ,ಭಗವಾನ್ ರಘುನಾಥನ ಭವ್ಯ ರಥೋತ್ಸವವನ್ನು ನಡೆಸಲಾಯಿತು, ಇದರಲ್ಲಿ ಸಾವಿರಾರು ಜನರು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿದ್ದರು. ನೂರಕ್ಕೂ ಹೆಚ್ಚು ದೇವತೆಗಳು ರಥೋತ್ಸವದಲ್ಲಿ ಕಾಣಸಿಗುತ್ತದೆ. ದಸರಾ ಹಬ್ಬದ ಸಂದರ್ಭದಲ್ಲಿ 25 ದೇಶಗಳ ಸಾಂಸ್ಕೃತಿಕ ತಂಡಗಳು ತಮ್ಮ ಪ್ರದರ್ಶನಗಳನ್ನು ಪ್ರಸ್ತುತಪಡಿಸಲಿವೆ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗುತ್ತದೆ.
ಕಾರ್ಯಕ್ರಮವನ್ನು ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಸೇರಿದಂತೆ, ಸಾವಿರಾರು ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಉಪಸ್ಥಿತರಿದ್ದರು. ಇದೇ 19 ರಂದು, ಕುಲು ಕಾರ್ನಿವಲ್ ಅಂತರರಾಷ್ಟ್ರೀಯ ದಸರಾ ಉತ್ಸವ ಜರುಗಲಿದೆ. ಇದರಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯಕ್ರಮಗಳು ಮತ್ತು ಸಾಧನೆಗಳನ್ನು ಎತ್ತಿ ತೋರಿಸುವ ಪ್ರದರ್ಶನಗಳು ಒಳಗೊಂಡಿರುತ್ತದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…