#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

September 6, 2023
1:24 PM
ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ದಸರಾ ತಯಾರಿಗಳು ನಡೆಯುತ್ತಿವೆ.

ನಾಡ ಹಬ್ಬ ಮೈಸೂರು ದಸರಾಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಬ್ಬದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಇದರಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಕಾಳಜಿ ತೋರಲಾಗುತ್ತದೆ. ಅವು ದುಬಾರೆಯಿಂದ ಅರಮನೆಗೆ ಬಂದ ಮೇಲೆ ಅದಕ್ಕೆ ವಿಶೇಷ ಆಹಾರಗಳನ್ನು ನೀಡಿ ಭಾರಿ ಕಾಳಜಿಯಿಂದ ನೋಡಿಕೊಳ್ಳಲಾಗುತ್ತದೆ. ಈಗ ಅವುಗಳ ತೂಕವನ್ನು ಅಳೆಯಲಾಗಿದೆ.

Advertisement

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.

ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.

ಆನೆಗಳ ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ.

ದಸರಾ ಗಜಪಡೆಯ ತೂಕದ ವಿವರ:

Advertisement

ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group