#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

September 6, 2023
1:24 PM
ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ದಸರಾ ತಯಾರಿಗಳು ನಡೆಯುತ್ತಿವೆ.

ನಾಡ ಹಬ್ಬ ಮೈಸೂರು ದಸರಾಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಬ್ಬದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಇದರಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಕಾಳಜಿ ತೋರಲಾಗುತ್ತದೆ. ಅವು ದುಬಾರೆಯಿಂದ ಅರಮನೆಗೆ ಬಂದ ಮೇಲೆ ಅದಕ್ಕೆ ವಿಶೇಷ ಆಹಾರಗಳನ್ನು ನೀಡಿ ಭಾರಿ ಕಾಳಜಿಯಿಂದ ನೋಡಿಕೊಳ್ಳಲಾಗುತ್ತದೆ. ಈಗ ಅವುಗಳ ತೂಕವನ್ನು ಅಳೆಯಲಾಗಿದೆ.

Advertisement
Advertisement

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.

Advertisement

ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.

ಆನೆಗಳ ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ.

Advertisement

ದಸರಾ ಗಜಪಡೆಯ ತೂಕದ ವಿವರ:

ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು : ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ
April 28, 2024
4:40 PM
by: The Rural Mirror ಸುದ್ದಿಜಾಲ
ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |
April 28, 2024
4:01 PM
by: ಮಹೇಶ್ ಪುಚ್ಚಪ್ಪಾಡಿ
ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |
April 28, 2024
2:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror