ನಾಡ ಹಬ್ಬ ಮೈಸೂರು ದಸರಾಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಬ್ಬದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಇದರಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಕಾಳಜಿ ತೋರಲಾಗುತ್ತದೆ. ಅವು ದುಬಾರೆಯಿಂದ ಅರಮನೆಗೆ ಬಂದ ಮೇಲೆ ಅದಕ್ಕೆ ವಿಶೇಷ ಆಹಾರಗಳನ್ನು ನೀಡಿ ಭಾರಿ ಕಾಳಜಿಯಿಂದ ನೋಡಿಕೊಳ್ಳಲಾಗುತ್ತದೆ. ಈಗ ಅವುಗಳ ತೂಕವನ್ನು ಅಳೆಯಲಾಗಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.
ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.
ಆನೆಗಳ ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ.
ದಸರಾ ಗಜಪಡೆಯ ತೂಕದ ವಿವರ:
ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…