ನಾಡ ಹಬ್ಬ ಮೈಸೂರು ದಸರಾಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಬ್ಬದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಇದರಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಕಾಳಜಿ ತೋರಲಾಗುತ್ತದೆ. ಅವು ದುಬಾರೆಯಿಂದ ಅರಮನೆಗೆ ಬಂದ ಮೇಲೆ ಅದಕ್ಕೆ ವಿಶೇಷ ಆಹಾರಗಳನ್ನು ನೀಡಿ ಭಾರಿ ಕಾಳಜಿಯಿಂದ ನೋಡಿಕೊಳ್ಳಲಾಗುತ್ತದೆ. ಈಗ ಅವುಗಳ ತೂಕವನ್ನು ಅಳೆಯಲಾಗಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.
ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.
ಆನೆಗಳ ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ.
ದಸರಾ ಗಜಪಡೆಯ ತೂಕದ ವಿವರ:
ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…