ಮಾಹಿತಿ

#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಡ ಹಬ್ಬ ಮೈಸೂರು ದಸರಾಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಬ್ಬದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಇದರಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಕಾಳಜಿ ತೋರಲಾಗುತ್ತದೆ. ಅವು ದುಬಾರೆಯಿಂದ ಅರಮನೆಗೆ ಬಂದ ಮೇಲೆ ಅದಕ್ಕೆ ವಿಶೇಷ ಆಹಾರಗಳನ್ನು ನೀಡಿ ಭಾರಿ ಕಾಳಜಿಯಿಂದ ನೋಡಿಕೊಳ್ಳಲಾಗುತ್ತದೆ. ಈಗ ಅವುಗಳ ತೂಕವನ್ನು ಅಳೆಯಲಾಗಿದೆ.

Advertisement

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.

ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.

ಆನೆಗಳ ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ.

Advertisement

ದಸರಾ ಗಜಪಡೆಯ ತೂಕದ ವಿವರ:

Advertisement

ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

1 hour ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

2 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

2 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

23 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago