ನಾಡ ಹಬ್ಬ ಮೈಸೂರು ದಸರಾಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಬ್ಬದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಇದರಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಕಾಳಜಿ ತೋರಲಾಗುತ್ತದೆ. ಅವು ದುಬಾರೆಯಿಂದ ಅರಮನೆಗೆ ಬಂದ ಮೇಲೆ ಅದಕ್ಕೆ ವಿಶೇಷ ಆಹಾರಗಳನ್ನು ನೀಡಿ ಭಾರಿ ಕಾಳಜಿಯಿಂದ ನೋಡಿಕೊಳ್ಳಲಾಗುತ್ತದೆ. ಈಗ ಅವುಗಳ ತೂಕವನ್ನು ಅಳೆಯಲಾಗಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.
ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.
ಆನೆಗಳ ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ.
ದಸರಾ ಗಜಪಡೆಯ ತೂಕದ ವಿವರ:
ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…