Advertisement
ಮಾಹಿತಿ

#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

Share

ನಾಡ ಹಬ್ಬ ಮೈಸೂರು ದಸರಾಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಬ್ಬದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಇದರಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಕಾಳಜಿ ತೋರಲಾಗುತ್ತದೆ. ಅವು ದುಬಾರೆಯಿಂದ ಅರಮನೆಗೆ ಬಂದ ಮೇಲೆ ಅದಕ್ಕೆ ವಿಶೇಷ ಆಹಾರಗಳನ್ನು ನೀಡಿ ಭಾರಿ ಕಾಳಜಿಯಿಂದ ನೋಡಿಕೊಳ್ಳಲಾಗುತ್ತದೆ. ಈಗ ಅವುಗಳ ತೂಕವನ್ನು ಅಳೆಯಲಾಗಿದೆ.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.

ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.

ಆನೆಗಳ ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ.

ದಸರಾ ಗಜಪಡೆಯ ತೂಕದ ವಿವರ:

ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

52 minutes ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

4 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

9 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

16 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

16 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago