ನಾಡ ಹಬ್ಬ ಮೈಸೂರು ದಸರಾಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಬ್ಬದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಇದರಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಕಾಳಜಿ ತೋರಲಾಗುತ್ತದೆ. ಅವು ದುಬಾರೆಯಿಂದ ಅರಮನೆಗೆ ಬಂದ ಮೇಲೆ ಅದಕ್ಕೆ ವಿಶೇಷ ಆಹಾರಗಳನ್ನು ನೀಡಿ ಭಾರಿ ಕಾಳಜಿಯಿಂದ ನೋಡಿಕೊಳ್ಳಲಾಗುತ್ತದೆ. ಈಗ ಅವುಗಳ ತೂಕವನ್ನು ಅಳೆಯಲಾಗಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.
ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.
ಆನೆಗಳ ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ.
ದಸರಾ ಗಜಪಡೆಯ ತೂಕದ ವಿವರ:
ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…