Advertisement
ಮಾಹಿತಿ

#MysoreDasara | ನಾಡ ಹಬ್ಬಕ್ಕೆ ಭರ್ಜರಿ ತಯಾರಿ | ದಸರಾ ಆನೆಗಳ ತೂಕ ಪರೀಕ್ಷೆ | ಬರೋಬ್ಬರಿ 5 ಟನ್ ತೂಗಿದ ಕ್ಯಾಪ್ಟನ್ ಅಭಿಮನ್ಯು

Share

ನಾಡ ಹಬ್ಬ ಮೈಸೂರು ದಸರಾಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಬ್ಬದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಇದರಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಕಾಳಜಿ ತೋರಲಾಗುತ್ತದೆ. ಅವು ದುಬಾರೆಯಿಂದ ಅರಮನೆಗೆ ಬಂದ ಮೇಲೆ ಅದಕ್ಕೆ ವಿಶೇಷ ಆಹಾರಗಳನ್ನು ನೀಡಿ ಭಾರಿ ಕಾಳಜಿಯಿಂದ ನೋಡಿಕೊಳ್ಳಲಾಗುತ್ತದೆ. ಈಗ ಅವುಗಳ ತೂಕವನ್ನು ಅಳೆಯಲಾಗಿದೆ.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ.

ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ ತೂಗಿದ್ದಾನೆ. ಈ ಮೂಲಕ ಆರೋಗ್ಯವಂತ ತೂಕವನ್ನು ಹೊಂದಿದ್ದಾನೆ ಎಂದು ಗುರುತಿಸಲಾಗಿದೆ.

ಆನೆಗಳ ತೂಕದ ಆಧಾರದ ಮೇಲೆ ಅವುಗಳ ಆಹಾರ ಮತ್ತು ತರಬೇತಿ ನಿಗದಿಯಾಗುತ್ತದೆ. ಆನೆಗಳು ಆರೋಗ್ಯವಂತ ತೂಕವನ್ನು ಹೊಂದಿದ್ದು, ಅವುಗಳಿಗೆ ಸೂಕ್ತ ಆಹಾರ ಹಾಗೂ ತರಬೇತಿಗೆ ಸಜ್ಜುಗೊಳಿಸಲು ಕ್ರಮ ವಹಿಸಲಾಗಿದೆ.

ದಸರಾ ಗಜಪಡೆಯ ತೂಕದ ವಿವರ:

ವಿಜಯ – 2,830 ಕೆಜಿ
ಭೀಮ – 4,370 ಕೆಜಿ
ವರಲಕ್ಷ್ಮಿ – 3,020 ಕೆಜಿ
ಮಹೇಂದ್ರ – 4,530 ಕೆಜಿ
ಧನಂಜಯ – 4,940 ಕೆಜಿ
ಕಂಜನ್ – 4,240 ಕೆಜಿ
ಗೋಪಿ – 5,080 ಕೆಜಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago