ಸುದ್ದಿಗಳು

ಫೆ.16 | ಪುತ್ತೂರಿನಲ್ಲಿ ‘ದ್ವಾರಕೋತ್ಸವ-2025’ | ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ |

Share

“ನಿಮ್ಮ ಮನೆಯ ಕನಸು ನಮ್ಮಲ್ಲಿ ನನಸು” ಎಂಬ ಧೈಯವಾಕ್ಯದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬಡಾವಣೆಗಳನ್ನು ಮತ್ತು ಮನೆಗಳನ್ನು ನಿರ್ಮಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿರುವ ಜೊತೆಗೆ ಹಿರಿಯ ನಾಗರಿಕರಿಗೂ ವಿಶೇಷ ಬಡವಾವಣೆಗಳನ್ನು ನಿರ್ಮಿಸಿ ಅಭಿವೃದ್ಧಿ ಪಡಿಸುತ್ತಿರುವ ದ್ವಾರಕಾ ಕಾರ್ಪೋರೇಷನ್ ಪ್ರೈವೆಟ್ ಲಿಮಿಟೆಡ್ ಕಂಪೆನಿಯ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನದ ವತಿಯಿಂದ 5 ನೇ ವರ್ಷದ ದ್ವಾರಕೋತ್ಸವ ಫೆ.16ರಂದು ಪುತ್ತೂರು ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ. ಈ ಬಾರಿ ವಿಶೇಷವಾಗಿ ಕೃಷಿ ಹಾಗೂ ಆರ್ಥಿಕ ವಿಚಾರಗೋಷ್ಟಿ ನಡೆಯಲಿದೆ. ಇದೇ ಸಂದರ್ಭ ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ  ನಡೆಯಲಿದೆ ಎಂದು ದ್ವಾರಕಾ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ತಿಳಿಸಿದ್ದಾರೆ.……… ಮುಂದೆ ಓದಿ…….

Advertisement

ದ್ವಾರಕಾ ಪ್ರತಿಷ್ಠಾನ ವಿವಿಧ ವೈದಿಕ, ಸಾಮಾಜಿಕ, ಸಾಹಿತ್ಯಕ, ಸಾಂಸ್ಕೃತಿಕ, ಯಕ್ಷಗಾನ, ಸಂಗೀತ, ಗೋಸೇವೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. ಭಾರತೀಯ ಸಂಸ್ಕೃತಿಯ ಸಂರಕ್ಷಣೆ, ಅನುಷ್ಠಾನ, ಸಂವರ್ಧನೆ ನಮ್ಮ ಧೈಯವಾಗಿದೆ ಎಂದು ದ್ವಾರಕಾ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಹೇಳುತ್ತಾರೆ.  ಆರ್ಥಿಕ ವ್ಯವಹಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆದಾಯದ ಒಂದಷ್ಟು ಭಾಗವನ್ನು ಈ ಬಗೆಯ ಕಾರ್ಯಕ್ರಮಗಳಲ್ಲಿ ವಿನಿಯೋಗಿಸುವ ಮೂಲಕ ಸಾರ್ಥಕತೆಯನ್ನು ಹೊಂದುವ ಉದ್ದೇಶ ನಮ್ಮದಾಗಿದೆ ಎನ್ನುತ್ತಾರೆ.

ಫೆ.16 ರಂದು ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ನೆರವೇರಿಸಲಿದ್ದು, ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಭಟ್ಟ ಅರ್ತ್ಯಡ್ಕ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಕ್ಕಳ ತಜ್ಞ, ಆಪ್ತ ಸಲಹೆಗಾರ್ತಿ ಡಾ.ಸುಲೇಖಾ ವರದರಾಜ್, ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ಟ ಬಂಗಾರಡ್ಕ, ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಪ್ರಸಾದ ಭಟ್ಟ ನೆಕ್ಕರಕಳೆಯ (ಸಾವಯವ ಕೃಷಿ), ಡಾ.ಗೋಪಾಲಕೃಷ್ಣ ಕಾಂಚೋಡು (ಭಾರತೀಯ ಸೇನೆ), ಪದ್ಯಾಣ ಶಂಕರನಾರಾಯಣ ಭಟ್ಟ (ಯಕ್ಷಗಾನ ಹಿಮ್ಮೇಳ), ಸ್ವಸ್ತಿಕ್ ಪದ್ಮ ಮುರ್ಗಜೆ (ವೈಜ್ಞಾನಿಕ ಸಂಶೋಧನೆ) ಹಾಗೂ ಸುದರ್ಶನ ಭಟ್ಟ ಬೆದ್ರಡಿ (ಆಹಾರೋದ್ಯಮ) ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಬೆಳಗ್ಗೆ 11.30 ರಿಂದ ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ ನಡೆಯಲಿದ್ದು, ರಿಯಲ್‌ ಎಸ್ಟೇಟ್‌ ಮತ್ತು ಆರ್ಥಿಕತೆಯ ಬಗ್ಗೆ   ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ಟ ಬಂಗಾರಡ್ಕ, ಅಡಿಕೆಗೆ ಪರ್ಯಾಯದ ಬಗ್ಗೆ  ಡಾ.ಗೋಪಾಲಕೃಷ್ಣ ಕಾಂಚೋಡು ಹಾಗೂ ದೇಸೀ ಗೋವು ಹಾಗೂ ಗವ್ಯೋತ್ಪನ್ನಗಳ ಬಗ್ಗೆ ಸುಬ್ರಹ್ಮಣ್ಯ ಪ್ರಸಾದ ಭಟ್ಟ ನೆಕ್ಕರಕಳೆಯ ಅವರು ಮಾತನಾಡುವರು. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

5 hours ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

6 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

8 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

1 day ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

1 day ago