Advertisement
ಕೃಷಿ

ಇ-ಪೌತಿ ವಿಶೇಷ ಅಭಿಯಾನದ ಮೂಲಕ ಭೂ ಖಾತೆ ಸಂಪೂರ್ಣ ಮಾಹಿತಿ

Share

ರೈತರು ತಮ್ಮ ಪೂರ್ವಜರ ಹೆಸರಿನಲ್ಲಿರುವ ಜಮೀನನ್ನು ತಮ್ಮ ಹೆಸರಿಗೆ ಸುಲಭವಾಗಿ ವರ್ಗಾಯಿಸಿಕೊಳ್ಳಲು ಕಂದಾಯ ಇಲಾಖೆಯು ಇ-ಪೌತಿ ಎಂಬ ವಿಶೇಷ ಅಭಿಯಾನವನ್ನು ನವೆಂಬರ್ 5,2025ರಿಂದ ನವೆಂಬರ್ 22,2025ರವರೆಗೆ ನಡೆಯಲಿದ್ದು, ಈ ಅಭಿಯಾನದ ಮೂಲಕ ತ್ವರಿತ, ಪಾರದರ್ಶಕ ಮತ್ತು ಡಿಜಿಟಲ್ ಆಧಾರಿತ ಖಾತೆ ಬದಲಾವಣೆ ಸಹಾಯಕವಾಗಲಿದೆ.

ಮರಣ ಹೊಂದಿದ ಹೆಸರಿನಲ್ಲಿ ಜಮೀನನ್ನು ಅವರ ಕಾನೂನುಬದ್ಧ ವಾರಸುದಾರರ ಹೆಸರಿಗೆ ವರ್ಗಾಯಿಸುವ ಪ್ರಕ್ರಿಯೆ ಸಂಕೀರ್ಣವಾಗಿದ್ದು, ದೀರ್ಘಕಾಲ ತೆಗೆದುಕೊಳ್ಳುತ್ತಿತ್ತು ಮತ್ತು ರೈತರಿಗೆ ತೊಂದರೆಯಾಗುತ್ತಿರುವ ಮತ್ತು ರೈತರ ಈ ಸಮಸ್ಯೆಯನ್ನು ನಿವಾರಿಸುವುದೇ ಈ ಅಭಿಯನದ ಮುಖ್ಯ ಉದ್ದೇಶ.
ಇ-ಪೌತಿಗೆ ಅರ್ಜಿ ಸಲ್ಲಿಸುವುದು ಹೇಗೆ ಮೃತ ರೈತರ ಕಾನೂನುಬದ್ಧ ವಾರಸುದಾರರನ್ನು ಖಚಿತಪಡಿಸುವ ದಾಖಲೆ. ಎರಡು ಮರಣ ಪ್ರಮಾಣಪತ್ರ- ಜಮೀನಿನ ಮೂಲ ಮಾಲೀಕರ ಮರಣ ಪ್ರಮಾಣಪತ್ರ, ಮೂರು ಆಧಾರ್ ಕಾರ್ಡ್- ಮೃತ ವ್ಯಕ್ತಿ ಮತ್ತು ಎಲ್ಲಾ ವಾರಸುದಾರರ ಆಧಾರ್ ಕಾರ್ಡ್ ಪ್ರತಿಗಳು. ನಾಲ್ಕು ಗಣಕೀಕೃತ ಪಹಣಿ- ಜಮೀನಿಗೆ ಸಂಬಂಧೀಸಿದ ಪ್ರಸ್ತುತ ಪಹಣಿ ದಾಖಲೆ. ಈ ದಾಖಲೆಗಳು ಸಂಪೂರ್ಣವಾಗಿರುವುದು ಅಗತ್ಯ. ಇನ್ನು ಈ ದಾಖಲೆಗಳನ್ನು ಸಮೀಪದ ನಾಡಕಚೇರಿ, ತಾಲ್ಲೂಕು ಕಚೇರಿ ಅಥವಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಒಂದು ವಾರದೊಳಗೆ ಎಲ್ಲಾ ವಾರಸುದಾರರ ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಪ್ರತ್ಯೇಕವಾಗಿ ಒಟಿಪಿ ಕಳುಹಿಸಲಾಗುತ್ತದೆ. ಖಾತೆ ಬದಲಾವಣೆಗೆ ತಮ್ಮ ಸಂಪೂರ್ಣ ಸಮ್ಮತಿ ಇದೆ ಎಂದು ಖಚಿತಪಡಿಸಲು ಪ್ರತಿ ವಾರಸುದಾರರು ತಮ್ಮ ಒಟಿಪಿಯನ್ನು ಅಧಿಕಾರಿಗಳಿಗೆ ತಿಳಿಸಬೇಕು. ಎಲ್ಲಾ ವಾರಸುದಾರರು ಒಪ್ಪಿಗೆ ದೊರೆತ ತಕ್ಷಣ ಪೌತಿ ಖಾತೆಯನ್ನು ಯಶಸ್ವಿಯಾಗಿ ದಾಖಲಿಸಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

9 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

9 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

9 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

10 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

22 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago