Advertisement
ಕೃಷಿ

ಇ-ಪೌತಿ ವಿಶೇಷ ಅಭಿಯಾನದ ಮೂಲಕ ಭೂ ಖಾತೆ ಸಂಪೂರ್ಣ ಮಾಹಿತಿ

Share

ರೈತರು ತಮ್ಮ ಪೂರ್ವಜರ ಹೆಸರಿನಲ್ಲಿರುವ ಜಮೀನನ್ನು ತಮ್ಮ ಹೆಸರಿಗೆ ಸುಲಭವಾಗಿ ವರ್ಗಾಯಿಸಿಕೊಳ್ಳಲು ಕಂದಾಯ ಇಲಾಖೆಯು ಇ-ಪೌತಿ ಎಂಬ ವಿಶೇಷ ಅಭಿಯಾನವನ್ನು ನವೆಂಬರ್ 5,2025ರಿಂದ ನವೆಂಬರ್ 22,2025ರವರೆಗೆ ನಡೆಯಲಿದ್ದು, ಈ ಅಭಿಯಾನದ ಮೂಲಕ ತ್ವರಿತ, ಪಾರದರ್ಶಕ ಮತ್ತು ಡಿಜಿಟಲ್ ಆಧಾರಿತ ಖಾತೆ ಬದಲಾವಣೆ ಸಹಾಯಕವಾಗಲಿದೆ.

ಮರಣ ಹೊಂದಿದ ಹೆಸರಿನಲ್ಲಿ ಜಮೀನನ್ನು ಅವರ ಕಾನೂನುಬದ್ಧ ವಾರಸುದಾರರ ಹೆಸರಿಗೆ ವರ್ಗಾಯಿಸುವ ಪ್ರಕ್ರಿಯೆ ಸಂಕೀರ್ಣವಾಗಿದ್ದು, ದೀರ್ಘಕಾಲ ತೆಗೆದುಕೊಳ್ಳುತ್ತಿತ್ತು ಮತ್ತು ರೈತರಿಗೆ ತೊಂದರೆಯಾಗುತ್ತಿರುವ ಮತ್ತು ರೈತರ ಈ ಸಮಸ್ಯೆಯನ್ನು ನಿವಾರಿಸುವುದೇ ಈ ಅಭಿಯನದ ಮುಖ್ಯ ಉದ್ದೇಶ.
ಇ-ಪೌತಿಗೆ ಅರ್ಜಿ ಸಲ್ಲಿಸುವುದು ಹೇಗೆ ಮೃತ ರೈತರ ಕಾನೂನುಬದ್ಧ ವಾರಸುದಾರರನ್ನು ಖಚಿತಪಡಿಸುವ ದಾಖಲೆ. ಎರಡು ಮರಣ ಪ್ರಮಾಣಪತ್ರ- ಜಮೀನಿನ ಮೂಲ ಮಾಲೀಕರ ಮರಣ ಪ್ರಮಾಣಪತ್ರ, ಮೂರು ಆಧಾರ್ ಕಾರ್ಡ್- ಮೃತ ವ್ಯಕ್ತಿ ಮತ್ತು ಎಲ್ಲಾ ವಾರಸುದಾರರ ಆಧಾರ್ ಕಾರ್ಡ್ ಪ್ರತಿಗಳು. ನಾಲ್ಕು ಗಣಕೀಕೃತ ಪಹಣಿ- ಜಮೀನಿಗೆ ಸಂಬಂಧೀಸಿದ ಪ್ರಸ್ತುತ ಪಹಣಿ ದಾಖಲೆ. ಈ ದಾಖಲೆಗಳು ಸಂಪೂರ್ಣವಾಗಿರುವುದು ಅಗತ್ಯ. ಇನ್ನು ಈ ದಾಖಲೆಗಳನ್ನು ಸಮೀಪದ ನಾಡಕಚೇರಿ, ತಾಲ್ಲೂಕು ಕಚೇರಿ ಅಥವಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಒಂದು ವಾರದೊಳಗೆ ಎಲ್ಲಾ ವಾರಸುದಾರರ ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಪ್ರತ್ಯೇಕವಾಗಿ ಒಟಿಪಿ ಕಳುಹಿಸಲಾಗುತ್ತದೆ. ಖಾತೆ ಬದಲಾವಣೆಗೆ ತಮ್ಮ ಸಂಪೂರ್ಣ ಸಮ್ಮತಿ ಇದೆ ಎಂದು ಖಚಿತಪಡಿಸಲು ಪ್ರತಿ ವಾರಸುದಾರರು ತಮ್ಮ ಒಟಿಪಿಯನ್ನು ಅಧಿಕಾರಿಗಳಿಗೆ ತಿಳಿಸಬೇಕು. ಎಲ್ಲಾ ವಾರಸುದಾರರು ಒಪ್ಪಿಗೆ ದೊರೆತ ತಕ್ಷಣ ಪೌತಿ ಖಾತೆಯನ್ನು ಯಶಸ್ವಿಯಾಗಿ ದಾಖಲಿಸಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

19 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago