Advertisement
ಕೃಷಿ

ಇ-ಪೌತಿ ವಿಶೇಷ ಅಭಿಯಾನದ ಮೂಲಕ ಭೂ ಖಾತೆ ಸಂಪೂರ್ಣ ಮಾಹಿತಿ

Share

ರೈತರು ತಮ್ಮ ಪೂರ್ವಜರ ಹೆಸರಿನಲ್ಲಿರುವ ಜಮೀನನ್ನು ತಮ್ಮ ಹೆಸರಿಗೆ ಸುಲಭವಾಗಿ ವರ್ಗಾಯಿಸಿಕೊಳ್ಳಲು ಕಂದಾಯ ಇಲಾಖೆಯು ಇ-ಪೌತಿ ಎಂಬ ವಿಶೇಷ ಅಭಿಯಾನವನ್ನು ನವೆಂಬರ್ 5,2025ರಿಂದ ನವೆಂಬರ್ 22,2025ರವರೆಗೆ ನಡೆಯಲಿದ್ದು, ಈ ಅಭಿಯಾನದ ಮೂಲಕ ತ್ವರಿತ, ಪಾರದರ್ಶಕ ಮತ್ತು ಡಿಜಿಟಲ್ ಆಧಾರಿತ ಖಾತೆ ಬದಲಾವಣೆ ಸಹಾಯಕವಾಗಲಿದೆ.

ಮರಣ ಹೊಂದಿದ ಹೆಸರಿನಲ್ಲಿ ಜಮೀನನ್ನು ಅವರ ಕಾನೂನುಬದ್ಧ ವಾರಸುದಾರರ ಹೆಸರಿಗೆ ವರ್ಗಾಯಿಸುವ ಪ್ರಕ್ರಿಯೆ ಸಂಕೀರ್ಣವಾಗಿದ್ದು, ದೀರ್ಘಕಾಲ ತೆಗೆದುಕೊಳ್ಳುತ್ತಿತ್ತು ಮತ್ತು ರೈತರಿಗೆ ತೊಂದರೆಯಾಗುತ್ತಿರುವ ಮತ್ತು ರೈತರ ಈ ಸಮಸ್ಯೆಯನ್ನು ನಿವಾರಿಸುವುದೇ ಈ ಅಭಿಯನದ ಮುಖ್ಯ ಉದ್ದೇಶ.
ಇ-ಪೌತಿಗೆ ಅರ್ಜಿ ಸಲ್ಲಿಸುವುದು ಹೇಗೆ ಮೃತ ರೈತರ ಕಾನೂನುಬದ್ಧ ವಾರಸುದಾರರನ್ನು ಖಚಿತಪಡಿಸುವ ದಾಖಲೆ. ಎರಡು ಮರಣ ಪ್ರಮಾಣಪತ್ರ- ಜಮೀನಿನ ಮೂಲ ಮಾಲೀಕರ ಮರಣ ಪ್ರಮಾಣಪತ್ರ, ಮೂರು ಆಧಾರ್ ಕಾರ್ಡ್- ಮೃತ ವ್ಯಕ್ತಿ ಮತ್ತು ಎಲ್ಲಾ ವಾರಸುದಾರರ ಆಧಾರ್ ಕಾರ್ಡ್ ಪ್ರತಿಗಳು. ನಾಲ್ಕು ಗಣಕೀಕೃತ ಪಹಣಿ- ಜಮೀನಿಗೆ ಸಂಬಂಧೀಸಿದ ಪ್ರಸ್ತುತ ಪಹಣಿ ದಾಖಲೆ. ಈ ದಾಖಲೆಗಳು ಸಂಪೂರ್ಣವಾಗಿರುವುದು ಅಗತ್ಯ. ಇನ್ನು ಈ ದಾಖಲೆಗಳನ್ನು ಸಮೀಪದ ನಾಡಕಚೇರಿ, ತಾಲ್ಲೂಕು ಕಚೇರಿ ಅಥವಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಒಂದು ವಾರದೊಳಗೆ ಎಲ್ಲಾ ವಾರಸುದಾರರ ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಪ್ರತ್ಯೇಕವಾಗಿ ಒಟಿಪಿ ಕಳುಹಿಸಲಾಗುತ್ತದೆ. ಖಾತೆ ಬದಲಾವಣೆಗೆ ತಮ್ಮ ಸಂಪೂರ್ಣ ಸಮ್ಮತಿ ಇದೆ ಎಂದು ಖಚಿತಪಡಿಸಲು ಪ್ರತಿ ವಾರಸುದಾರರು ತಮ್ಮ ಒಟಿಪಿಯನ್ನು ಅಧಿಕಾರಿಗಳಿಗೆ ತಿಳಿಸಬೇಕು. ಎಲ್ಲಾ ವಾರಸುದಾರರು ಒಪ್ಪಿಗೆ ದೊರೆತ ತಕ್ಷಣ ಪೌತಿ ಖಾತೆಯನ್ನು ಯಶಸ್ವಿಯಾಗಿ ದಾಖಲಿಸಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

2 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

8 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

9 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

19 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

20 hours ago