Advertisement
ಕೃಷಿ

ಇ-ಪೌತಿ ವಿಶೇಷ ಅಭಿಯಾನದ ಮೂಲಕ ಭೂ ಖಾತೆ ಸಂಪೂರ್ಣ ಮಾಹಿತಿ

Share

ರೈತರು ತಮ್ಮ ಪೂರ್ವಜರ ಹೆಸರಿನಲ್ಲಿರುವ ಜಮೀನನ್ನು ತಮ್ಮ ಹೆಸರಿಗೆ ಸುಲಭವಾಗಿ ವರ್ಗಾಯಿಸಿಕೊಳ್ಳಲು ಕಂದಾಯ ಇಲಾಖೆಯು ಇ-ಪೌತಿ ಎಂಬ ವಿಶೇಷ ಅಭಿಯಾನವನ್ನು ನವೆಂಬರ್ 5,2025ರಿಂದ ನವೆಂಬರ್ 22,2025ರವರೆಗೆ ನಡೆಯಲಿದ್ದು, ಈ ಅಭಿಯಾನದ ಮೂಲಕ ತ್ವರಿತ, ಪಾರದರ್ಶಕ ಮತ್ತು ಡಿಜಿಟಲ್ ಆಧಾರಿತ ಖಾತೆ ಬದಲಾವಣೆ ಸಹಾಯಕವಾಗಲಿದೆ.

ಮರಣ ಹೊಂದಿದ ಹೆಸರಿನಲ್ಲಿ ಜಮೀನನ್ನು ಅವರ ಕಾನೂನುಬದ್ಧ ವಾರಸುದಾರರ ಹೆಸರಿಗೆ ವರ್ಗಾಯಿಸುವ ಪ್ರಕ್ರಿಯೆ ಸಂಕೀರ್ಣವಾಗಿದ್ದು, ದೀರ್ಘಕಾಲ ತೆಗೆದುಕೊಳ್ಳುತ್ತಿತ್ತು ಮತ್ತು ರೈತರಿಗೆ ತೊಂದರೆಯಾಗುತ್ತಿರುವ ಮತ್ತು ರೈತರ ಈ ಸಮಸ್ಯೆಯನ್ನು ನಿವಾರಿಸುವುದೇ ಈ ಅಭಿಯನದ ಮುಖ್ಯ ಉದ್ದೇಶ.
ಇ-ಪೌತಿಗೆ ಅರ್ಜಿ ಸಲ್ಲಿಸುವುದು ಹೇಗೆ ಮೃತ ರೈತರ ಕಾನೂನುಬದ್ಧ ವಾರಸುದಾರರನ್ನು ಖಚಿತಪಡಿಸುವ ದಾಖಲೆ. ಎರಡು ಮರಣ ಪ್ರಮಾಣಪತ್ರ- ಜಮೀನಿನ ಮೂಲ ಮಾಲೀಕರ ಮರಣ ಪ್ರಮಾಣಪತ್ರ, ಮೂರು ಆಧಾರ್ ಕಾರ್ಡ್- ಮೃತ ವ್ಯಕ್ತಿ ಮತ್ತು ಎಲ್ಲಾ ವಾರಸುದಾರರ ಆಧಾರ್ ಕಾರ್ಡ್ ಪ್ರತಿಗಳು. ನಾಲ್ಕು ಗಣಕೀಕೃತ ಪಹಣಿ- ಜಮೀನಿಗೆ ಸಂಬಂಧೀಸಿದ ಪ್ರಸ್ತುತ ಪಹಣಿ ದಾಖಲೆ. ಈ ದಾಖಲೆಗಳು ಸಂಪೂರ್ಣವಾಗಿರುವುದು ಅಗತ್ಯ. ಇನ್ನು ಈ ದಾಖಲೆಗಳನ್ನು ಸಮೀಪದ ನಾಡಕಚೇರಿ, ತಾಲ್ಲೂಕು ಕಚೇರಿ ಅಥವಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಒಂದು ವಾರದೊಳಗೆ ಎಲ್ಲಾ ವಾರಸುದಾರರ ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಪ್ರತ್ಯೇಕವಾಗಿ ಒಟಿಪಿ ಕಳುಹಿಸಲಾಗುತ್ತದೆ. ಖಾತೆ ಬದಲಾವಣೆಗೆ ತಮ್ಮ ಸಂಪೂರ್ಣ ಸಮ್ಮತಿ ಇದೆ ಎಂದು ಖಚಿತಪಡಿಸಲು ಪ್ರತಿ ವಾರಸುದಾರರು ತಮ್ಮ ಒಟಿಪಿಯನ್ನು ಅಧಿಕಾರಿಗಳಿಗೆ ತಿಳಿಸಬೇಕು. ಎಲ್ಲಾ ವಾರಸುದಾರರು ಒಪ್ಪಿಗೆ ದೊರೆತ ತಕ್ಷಣ ಪೌತಿ ಖಾತೆಯನ್ನು ಯಶಸ್ವಿಯಾಗಿ ದಾಖಲಿಸಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

1 day ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago