ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.
ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.
ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…