ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.
ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.
ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…