ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.
ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.
ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…