ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.
ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.
ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…