ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.
ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.
ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…