ಭಾರತದಲ್ಲಿ ಇ-ಸ್ಕೂಟರ್ ಗಳಿಗೆ ಬೆಂಕಿ ಹತ್ತಿಕೊಳ್ಳುತ್ತಿರುವುದು ದೋಷಪೂರಿತ ಬ್ಯಾಟರಿ, ಮಾಡ್ಯೂಲ್ ಗಳಿಂದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್ ಗಳಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡು ಸ್ಕೂಟರ್ ಗಳು ಸುಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು.
ಈ ಮಧ್ಯೆ, ಕೇಂದ್ರ ಸರ್ಕಾರ ಈ ಅಗ್ನಿ ಅನಾಹುತಕ್ಕೆ ಕಾರಣಗಳೇನೆಂಬುದನ್ನು ಪತ್ತೆ ಮಾಡಿ ಪರಿಹಾರವಾದ ನಂತರವೇ ಇ-ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಕಳುಹಿಸಬೇಕೆಂದು ವಾಹನ ತಯಾರಕರಿಗೆ ಮೌಖಿಕ ಸಂದೇಶ ರವಾನೆ ಮಾಡಿತ್ತು.ಅಲ್ಲದೇ, ಈ ಅನಾಹುತಗಳಿಗೆ ಕಾರಣಗಳೇನೆಂಬುದರ ಬಗ್ಗೆ ತನಿಖೆ ನಡೆಸುವಂತೆಯೂ ಸೂಚನೆ ನೀಡಿತ್ತು.
ಇದೀಗ ಸ್ವತಂತ್ರ ಸಂಸ್ಥೆಯೊಂದು ತನಿಖೆ ನಡೆಸಿದ್ದು, ಅದರ ಪ್ರಾಥಮಿಕ ವರದಿ ಪ್ರಕಾರ, ಅಗ್ನಿ ಅನಾಹುತಕ್ಕೆ ಇ-ಸ್ಕೂಟರ್ ಗಳಲ್ಲಿ ಬಳಸಲಾಗುತ್ತಿರುವ ಬ್ಯಾಟರಿ ಸೆಲ್ಸ್ ಮತ್ತು ಮಾಡ್ಯೂಲ್ ಗಳಲ್ಲಿನ ದೋಷದಿಂದ ಅನಾಹುತ ಸಂಭವಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…