ಭಾರತದಲ್ಲಿ ಇದೀಗ ಇ ತ್ಯಾಜ್ಯ ಉತ್ಪಾದನೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಭಾರತದಲ್ಲಿ 3.2 ಮಿಲಿಯನ್ ಟನ್ ಇ-ತ್ಯಾಜ್ಯವನ್ನು ಉತ್ಪಾದಿಸಿದೆ. ಕಳೆದ ವರ್ಷ ಭಾರತವು 3.2 ಮಿಲಿಯನ್ ಟನ್ ಇ-ತ್ಯಾಜ್ಯವನ್ನು ಉತ್ಪಾದಿಸಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ. ಇದೀಗ ಈ ತ್ಯಾಜ್ಯ ಉತ್ಪಾದನೆಯೇ ತಲೆನೋವಿನ ಸಮಸ್ಯೆಯಾಗಲಿದೆ.
ಕಳೆದ ಎರಡು ವರ್ಷಗಳಲ್ಲಿ ಇ ತ್ಯಾಜ್ಯ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಲಾಕ್ಡೌನ್ ಸಮಯದಲ್ಲಿ ಅನೇಕ ಜನರು ಸಾಮಾನ್ಯಕ್ಕಿಂತ ಹೆಚ್ಚು ತಂತ್ರಜ್ಞಾನವನ್ನು ಅವಲಂಬಿಸಿರುವುದರಿಂದ ಕಳೆದ ವರ್ಷ ಇ-ತ್ಯಾಜ್ಯ ಉತ್ಪಾದನೆಯು ಹೆಚ್ಚಾಗಿದೆ ಎಂದು ಅಧ್ಯಯನಗಳು ಹೇಳಿದೆ. ಅಭಿವೃದ್ಧಿ, ತಂತ್ರಜ್ಞಾನಗಳ ಬಳಕೆ ಈಗ ಹೆಚ್ಚಾಗುತ್ತಿರುವುದು ಇವುಗಳ ನಿಯಂತ್ರಣದ ಬಗ್ಗೆ ಈಗ ಹೆಚ್ಚಿನ ಅಧ್ಯಯನಗಳು ಆರಂಭವಾಗುತ್ತಿದೆ. ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಈ ಬಗ್ಗೆ ಈಗಲೇ ಕ್ರಮ ಅಗತ್ಯ ಎಂಬುದನ್ನು ಕೂಡಾ ಎಚ್ಚರಿಸಲಾಗಿದೆ.
ಸ್ವೀಡಿಷ್ ಸೊಸೈಟಿ ಫಾರ್ ನೇಚರ್ ಕನ್ಸರ್ವೇಶನ್ ಪ್ರಾಯೋಜಿಸಿದ ಮತ್ತು ಅಡ್ವೊಕಸಿ ಗ್ರೂಪ್ ಕನ್ಸ್ಯೂಮರ್ ಯೂನಿಟಿ & ಟ್ರಸ್ಟ್ ಸೊಸೈಟಿ ನಡೆಸಿದ ಅಧ್ಯಯನವು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಹಾಗೂ ತಂತ್ರಜ್ಞಾನಗಳ ಬಳಕೆಯ ಬಗ್ಗೆ ಪರಿಶೀಲಿಸಿದೆ. ಈಗಿನ ಸನ್ನಿವೇಶದಲಿ ಇ ತ್ಯಾಜ್ಯ ಕಡಿಮೆ ಮಾಡಲು ಸರ್ಕಾರವು ಕೆಲವು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳದ ಹೊರತು 2030 ರ ವೇಳೆಗೆ ಭಾರತವು ಪರಿಸರಕ್ಕೆ ಸಂಬಂಧಿಸಿದ ಪ್ರಮುಖ ಗುರಿಯನ್ನು ತಲುಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. 2030 ರ ವೇಳೆಗೆ ಭಾರತವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟಕ್ಕೆ ಪರಿಸರದ ಬಗ್ಗೆಯೂ ಕಾಳಜಿ ವಹಿಸಬೇಕಾಗುತ್ತದೆ. ಭಾರತವು ಹಸಿರು ಮೂಲಸೌಕರ್ಯ ರಚಿಸಬೇಕು ಎಂದು ಸಲಹೆ ನೀಡಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…