Advertisement
MIRROR FOCUS

ಭಾರತದಲ್ಲಿ ಹೆಚ್ಚಾಗುತ್ತಿರುವ ಇ ತ್ಯಾಜ್ಯ | ಕಳೆದ ವರ್ಷ ಭಾರತದಲ್ಲಿ 3.2 ಮಿಲಿಯನ್ ಟನ್ ಇ-ತ್ಯಾಜ್ಯ ಉತ್ಪಾದನೆ | ಇ ತ್ಯಾಜ್ಯದಲ್ಲಿ ಜಾಗತಿಕವಾಗಿ ಭಾರತಕ್ಕೆ ಮೂರನೇ ಸ್ಥಾನ…! |

Share

ಭಾರತದಲ್ಲಿ ಇದೀಗ ಇ ತ್ಯಾಜ್ಯ ಉತ್ಪಾದನೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಭಾರತದಲ್ಲಿ 3.2 ಮಿಲಿಯನ್ ಟನ್ ಇ-ತ್ಯಾಜ್ಯವನ್ನು ಉತ್ಪಾದಿಸಿದೆ. ಕಳೆದ ವರ್ಷ ಭಾರತವು 3.2 ಮಿಲಿಯನ್ ಟನ್ ಇ-ತ್ಯಾಜ್ಯವನ್ನು ಉತ್ಪಾದಿಸಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ. ಇದೀಗ ಈ ತ್ಯಾಜ್ಯ ಉತ್ಪಾದನೆಯೇ ತಲೆನೋವಿನ ಸಮಸ್ಯೆಯಾಗಲಿದೆ.

ಕಳೆದ ಎರಡು ವರ್ಷಗಳಲ್ಲಿ ಇ ತ್ಯಾಜ್ಯ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಲಾಕ್‌ಡೌನ್ ಸಮಯದಲ್ಲಿ ಅನೇಕ ಜನರು ಸಾಮಾನ್ಯಕ್ಕಿಂತ ಹೆಚ್ಚು ತಂತ್ರಜ್ಞಾನವನ್ನು ಅವಲಂಬಿಸಿರುವುದರಿಂದ ಕಳೆದ ವರ್ಷ ಇ-ತ್ಯಾಜ್ಯ ಉತ್ಪಾದನೆಯು ಹೆಚ್ಚಾಗಿದೆ ಎಂದು ಅಧ್ಯಯನಗಳು ಹೇಳಿದೆ. ಅಭಿವೃದ್ಧಿ, ತಂತ್ರಜ್ಞಾನಗಳ ಬಳಕೆ ಈಗ ಹೆಚ್ಚಾಗುತ್ತಿರುವುದು ಇವುಗಳ ನಿಯಂತ್ರಣದ ಬಗ್ಗೆ ಈಗ ಹೆಚ್ಚಿನ ಅಧ್ಯಯನಗಳು ಆರಂಭವಾಗುತ್ತಿದೆ. ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ  ಈ ಬಗ್ಗೆ ಈಗಲೇ ಕ್ರಮ ಅಗತ್ಯ ಎಂಬುದನ್ನು ಕೂಡಾ ಎಚ್ಚರಿಸಲಾಗಿದೆ.

ಸ್ವೀಡಿಷ್ ಸೊಸೈಟಿ ಫಾರ್ ನೇಚರ್ ಕನ್ಸರ್ವೇಶನ್ ಪ್ರಾಯೋಜಿಸಿದ ಮತ್ತು ಅಡ್ವೊಕಸಿ ಗ್ರೂಪ್ ಕನ್ಸ್ಯೂಮರ್ ಯೂನಿಟಿ & ಟ್ರಸ್ಟ್ ಸೊಸೈಟಿ  ನಡೆಸಿದ ಅಧ್ಯಯನವು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಹಾಗೂ ತಂತ್ರಜ್ಞಾನಗಳ ಬಳಕೆಯ ಬಗ್ಗೆ ಪರಿಶೀಲಿಸಿದೆ. ಈಗಿನ ಸನ್ನಿವೇಶದಲಿ ಇ ತ್ಯಾಜ್ಯ ಕಡಿಮೆ ಮಾಡಲು ಸರ್ಕಾರವು ಕೆಲವು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳದ ಹೊರತು 2030 ರ ವೇಳೆಗೆ ಭಾರತವು ಪರಿಸರಕ್ಕೆ ಸಂಬಂಧಿಸಿದ ಪ್ರಮುಖ ಗುರಿಯನ್ನು ತಲುಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. 2030 ರ ವೇಳೆಗೆ ಭಾರತವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟಕ್ಕೆ ಪರಿಸರದ ಬಗ್ಗೆಯೂ ಕಾಳಜಿ ವಹಿಸಬೇಕಾಗುತ್ತದೆ. ಭಾರತವು ಹಸಿರು ಮೂಲಸೌಕರ್ಯ ರಚಿಸಬೇಕು ಎಂದು ಸಲಹೆ ನೀಡಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago