ಆಂಧ್ರಪ್ರದೇಶ | ಇ-ಸ್ಕೂಟರ್ ಬ್ಯಾಟರಿ ಸ್ಫೋಟಕ್ಕೆ ಓರ್ವ ಬಲಿ | 3 ಮಂದಿಗೆ ಗಾಯ |

April 24, 2022
8:34 AM

ಮಹಾರಾಷ್ಟ್ರದ ವಿಜಯವಾಡದಲ್ಲಿ ಶನಿವಾರ ಮುಂಜಾನೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ವ್ಯಕ್ತಿ ಮಲಗುವ ಕೋಣೆಯಲ್ಲಿ ಬ್ಯಾಟರಿಯನ್ನು ಚಾರ್ಜಿಂಗ್‌ನಲ್ಲಿ ಇರಿಸಿದ್ದರು. ಶಿವಕುಮಾರ್, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳಿಗೆ ಸುಟ್ಟ ಗಾಯಗಳಾಗಿವೆ. 

ಶಿವಕುಮಾರ್‌ ಅವರು ಶುಕ್ರವಾರ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ್ದರು. ಒಂದು ವಾರದ ಅವಧಿಯಲ್ಲಿ  ಇದು ಎರಡನೇ ಘಟನೆಯಾಗಿದೆ. ಏಪ್ರಿಲ್ 19 ರಂದು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು ಮತ್ತು ಇಬ್ಬರು ಗಾಯಗೊಂಡಿದ್ದರು. ಆ ಪ್ರಕರಣದಲ್ಲೂ ಬ್ಯಾಟರಿ ಚಾರ್ಜ್ ಆಗುತ್ತಿದ್ದ ಮನೆಯಲ್ಲಿ ಈ ಘಟನೆ ನಡೆದಿತ್ತು. ಘಟನೆಯಲ್ಲಿ ಬಿ.ರಾಮಸ್ವಾಮಿ ಮೃತಪಟ್ಟರೆ, ಅವರನ್ನು ರಕ್ಷಿಸಲು ಯತ್ನಿಸಿದ ಪುತ್ರ ಬಿ.ಪ್ರಕಾಶ್ ಹಾಗೂ ಪುತ್ರಿ ಕಮಲಮ್ಮ ಅವರಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror