ಮಹಾರಾಷ್ಟ್ರದ ವಿಜಯವಾಡದಲ್ಲಿ ಶನಿವಾರ ಮುಂಜಾನೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ವ್ಯಕ್ತಿ ಮಲಗುವ ಕೋಣೆಯಲ್ಲಿ ಬ್ಯಾಟರಿಯನ್ನು ಚಾರ್ಜಿಂಗ್ನಲ್ಲಿ ಇರಿಸಿದ್ದರು. ಶಿವಕುಮಾರ್, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳಿಗೆ ಸುಟ್ಟ ಗಾಯಗಳಾಗಿವೆ.
ಶಿವಕುಮಾರ್ ಅವರು ಶುಕ್ರವಾರ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ್ದರು. ಒಂದು ವಾರದ ಅವಧಿಯಲ್ಲಿ ಇದು ಎರಡನೇ ಘಟನೆಯಾಗಿದೆ. ಏಪ್ರಿಲ್ 19 ರಂದು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು ಮತ್ತು ಇಬ್ಬರು ಗಾಯಗೊಂಡಿದ್ದರು. ಆ ಪ್ರಕರಣದಲ್ಲೂ ಬ್ಯಾಟರಿ ಚಾರ್ಜ್ ಆಗುತ್ತಿದ್ದ ಮನೆಯಲ್ಲಿ ಈ ಘಟನೆ ನಡೆದಿತ್ತು. ಘಟನೆಯಲ್ಲಿ ಬಿ.ರಾಮಸ್ವಾಮಿ ಮೃತಪಟ್ಟರೆ, ಅವರನ್ನು ರಕ್ಷಿಸಲು ಯತ್ನಿಸಿದ ಪುತ್ರ ಬಿ.ಪ್ರಕಾಶ್ ಹಾಗೂ ಪುತ್ರಿ ಕಮಲಮ್ಮ ಅವರಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…