Advertisement
ಸುದ್ದಿಗಳು

15,000 ಕಿಮೀ ಪ್ರಯಾಣಿಸಿ ಭಾರತಕ್ಕೆ ಮರಳಿ ಬಂದ ಹದ್ದು

Share

ಮಧ್ಯ ಪ್ರದೇಶದ ರಾಜ್ಯದ ವಿದಿಶಾ ಮತ್ತು ರೈಸೇನ್‌ನಿಂದ ಬಿಡುಗಡೆಯಾದ ರಣಹದ್ದು ಎಂಟು ತಿಂಗಳ ನಂತರ ಭಾರತಕ್ಕೆ ಮರಳಿದ್ದು, ಈ ಪಕ್ಷಿ 15,000 ಕಿಲೋಮೀಟರ್ ಪ್ರಯಾಣಿಸಿದೆ. ಅರಣ್ಯ ಇಲಾಖೆಯು ರಣಹದ್ದಿಗೆ ಉಪಗ್ರಹ ರೇಡಿಯೋ ಕಾಲರ್ ಅಳವಡಿಸಿದ್ದು, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು.  ಈ ರಣಹದ್ದನ್ನು ಮಾರ್ಚ್ 29ರಂದು ವಿದಿಶಾ-ರೈಸೆನ್‍ನಲ್ಲಿರು ಹಲಾಲಿ ಅಣೆಕಟ್ಟಿನಲ್ಲಿ ಅರಣ್ಯ ಇಲಾಖೆಯು ಉಪಗ್ರಹ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಲಾಗಿದ್ದು, ಇದು ಎಂಟು ತಿಂಗಳ ನಂತರ ಅಂದರೆ ಸುಮಾರು 15,000 ಕಿಲೋಮೀಟರ್ ಪ್ರಯಾಣಿಸಿ ಇದೀಗ ಭಾರತಕ್ಕೆ ಮರಳಿದೆ.

ಹದ್ದು ತನ್ನ ಪ್ರಯಾಣದ ಸಮಯದಲ್ಲಿ ಪಾಕಿಸ್ತಾನ, ಅಫ್ಫಾನಿಸ್ತಾನ, ಉಜ್ಬೇಕಿಸ್ತಾನ್ ಮತ್ತು ಕಝಾಕಿಸ್ತಾನ್‍ಗೆ ಪ್ರಯಾಣಿಸಿದ್ದು, ಪ್ರಸ್ತುತ ಇದು ರಾಜಸ್ಥಾನದ ಧೋಲ್ಬುರ್ ಜಿಲ್ಲೆಯ ಬಳಿ ಇದೆ ಎಂದು ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಹಲಾಲಿ ಅಣೆಕಟ್ಟಿನಿಂದ ಬಿಡುಗಡೆಯಾದ ಒಂದು ತಿಂಗಳೊಳಗೆ ರಣಹದ್ದು ಕಜಕಿಸ್ತಾನ್ ತಲುಪಿದೆ. ಮೇ ತಿಂಗಳಲ್ಲಿ ಕಜಕಿಸ್ತಾನ್‌ಗೆ ಬಂದ ನಂತರ ಅದು ನಾಲ್ಕು ತಿಂಗಳು ಅಲ್ಲೇ ಇತ್ತು. ನಂತರ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನ್ ಮೂಲಕ ಭಾರತಕ್ಕೆ ಮರಳಿದೆ. ರಣಹದ್ದು ಪ್ರಸ್ತುತ ರಾಜಸ್ಥಾನದ ಬಳಿಯ ಧೋಲ್ಪುರದಲ್ಲಿ ಬೀಡುಬಿಟ್ಟಿದೆ ಎಂದು ವಿದಿಶಾ ಡಿಎಫ್‌ಒ ಹೇಮಂತ್ ಯಾದವ್ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

8 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

9 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

9 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

9 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

10 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

10 hours ago