Advertisement
ಸುದ್ದಿಗಳು

15,000 ಕಿಮೀ ಪ್ರಯಾಣಿಸಿ ಭಾರತಕ್ಕೆ ಮರಳಿ ಬಂದ ಹದ್ದು

Share

ಮಧ್ಯ ಪ್ರದೇಶದ ರಾಜ್ಯದ ವಿದಿಶಾ ಮತ್ತು ರೈಸೇನ್‌ನಿಂದ ಬಿಡುಗಡೆಯಾದ ರಣಹದ್ದು ಎಂಟು ತಿಂಗಳ ನಂತರ ಭಾರತಕ್ಕೆ ಮರಳಿದ್ದು, ಈ ಪಕ್ಷಿ 15,000 ಕಿಲೋಮೀಟರ್ ಪ್ರಯಾಣಿಸಿದೆ. ಅರಣ್ಯ ಇಲಾಖೆಯು ರಣಹದ್ದಿಗೆ ಉಪಗ್ರಹ ರೇಡಿಯೋ ಕಾಲರ್ ಅಳವಡಿಸಿದ್ದು, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು.  ಈ ರಣಹದ್ದನ್ನು ಮಾರ್ಚ್ 29ರಂದು ವಿದಿಶಾ-ರೈಸೆನ್‍ನಲ್ಲಿರು ಹಲಾಲಿ ಅಣೆಕಟ್ಟಿನಲ್ಲಿ ಅರಣ್ಯ ಇಲಾಖೆಯು ಉಪಗ್ರಹ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಲಾಗಿದ್ದು, ಇದು ಎಂಟು ತಿಂಗಳ ನಂತರ ಅಂದರೆ ಸುಮಾರು 15,000 ಕಿಲೋಮೀಟರ್ ಪ್ರಯಾಣಿಸಿ ಇದೀಗ ಭಾರತಕ್ಕೆ ಮರಳಿದೆ.

ಹದ್ದು ತನ್ನ ಪ್ರಯಾಣದ ಸಮಯದಲ್ಲಿ ಪಾಕಿಸ್ತಾನ, ಅಫ್ಫಾನಿಸ್ತಾನ, ಉಜ್ಬೇಕಿಸ್ತಾನ್ ಮತ್ತು ಕಝಾಕಿಸ್ತಾನ್‍ಗೆ ಪ್ರಯಾಣಿಸಿದ್ದು, ಪ್ರಸ್ತುತ ಇದು ರಾಜಸ್ಥಾನದ ಧೋಲ್ಬುರ್ ಜಿಲ್ಲೆಯ ಬಳಿ ಇದೆ ಎಂದು ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

Advertisement

ಹಲಾಲಿ ಅಣೆಕಟ್ಟಿನಿಂದ ಬಿಡುಗಡೆಯಾದ ಒಂದು ತಿಂಗಳೊಳಗೆ ರಣಹದ್ದು ಕಜಕಿಸ್ತಾನ್ ತಲುಪಿದೆ. ಮೇ ತಿಂಗಳಲ್ಲಿ ಕಜಕಿಸ್ತಾನ್‌ಗೆ ಬಂದ ನಂತರ ಅದು ನಾಲ್ಕು ತಿಂಗಳು ಅಲ್ಲೇ ಇತ್ತು. ನಂತರ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನ್ ಮೂಲಕ ಭಾರತಕ್ಕೆ ಮರಳಿದೆ. ರಣಹದ್ದು ಪ್ರಸ್ತುತ ರಾಜಸ್ಥಾನದ ಬಳಿಯ ಧೋಲ್ಪುರದಲ್ಲಿ ಬೀಡುಬಿಟ್ಟಿದೆ ಎಂದು ವಿದಿಶಾ ಡಿಎಫ್‌ಒ ಹೇಮಂತ್ ಯಾದವ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

14 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

16 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

22 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago