ಮಧ್ಯ ಪ್ರದೇಶದ ರಾಜ್ಯದ ವಿದಿಶಾ ಮತ್ತು ರೈಸೇನ್ನಿಂದ ಬಿಡುಗಡೆಯಾದ ರಣಹದ್ದು ಎಂಟು ತಿಂಗಳ ನಂತರ ಭಾರತಕ್ಕೆ ಮರಳಿದ್ದು, ಈ ಪಕ್ಷಿ 15,000 ಕಿಲೋಮೀಟರ್ ಪ್ರಯಾಣಿಸಿದೆ. ಅರಣ್ಯ ಇಲಾಖೆಯು ರಣಹದ್ದಿಗೆ ಉಪಗ್ರಹ ರೇಡಿಯೋ ಕಾಲರ್ ಅಳವಡಿಸಿದ್ದು, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು. ಈ ರಣಹದ್ದನ್ನು ಮಾರ್ಚ್ 29ರಂದು ವಿದಿಶಾ-ರೈಸೆನ್ನಲ್ಲಿರು ಹಲಾಲಿ ಅಣೆಕಟ್ಟಿನಲ್ಲಿ ಅರಣ್ಯ ಇಲಾಖೆಯು ಉಪಗ್ರಹ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಲಾಗಿದ್ದು, ಇದು ಎಂಟು ತಿಂಗಳ ನಂತರ ಅಂದರೆ ಸುಮಾರು 15,000 ಕಿಲೋಮೀಟರ್ ಪ್ರಯಾಣಿಸಿ ಇದೀಗ ಭಾರತಕ್ಕೆ ಮರಳಿದೆ.
ಹದ್ದು ತನ್ನ ಪ್ರಯಾಣದ ಸಮಯದಲ್ಲಿ ಪಾಕಿಸ್ತಾನ, ಅಫ್ಫಾನಿಸ್ತಾನ, ಉಜ್ಬೇಕಿಸ್ತಾನ್ ಮತ್ತು ಕಝಾಕಿಸ್ತಾನ್ಗೆ ಪ್ರಯಾಣಿಸಿದ್ದು, ಪ್ರಸ್ತುತ ಇದು ರಾಜಸ್ಥಾನದ ಧೋಲ್ಬುರ್ ಜಿಲ್ಲೆಯ ಬಳಿ ಇದೆ ಎಂದು ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
ಹಲಾಲಿ ಅಣೆಕಟ್ಟಿನಿಂದ ಬಿಡುಗಡೆಯಾದ ಒಂದು ತಿಂಗಳೊಳಗೆ ರಣಹದ್ದು ಕಜಕಿಸ್ತಾನ್ ತಲುಪಿದೆ. ಮೇ ತಿಂಗಳಲ್ಲಿ ಕಜಕಿಸ್ತಾನ್ಗೆ ಬಂದ ನಂತರ ಅದು ನಾಲ್ಕು ತಿಂಗಳು ಅಲ್ಲೇ ಇತ್ತು. ನಂತರ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನ್ ಮೂಲಕ ಭಾರತಕ್ಕೆ ಮರಳಿದೆ. ರಣಹದ್ದು ಪ್ರಸ್ತುತ ರಾಜಸ್ಥಾನದ ಬಳಿಯ ಧೋಲ್ಪುರದಲ್ಲಿ ಬೀಡುಬಿಟ್ಟಿದೆ ಎಂದು ವಿದಿಶಾ ಡಿಎಫ್ಒ ಹೇಮಂತ್ ಯಾದವ್ ಹೇಳಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…