Advertisement
ಸುದ್ದಿಗಳು

15,000 ಕಿಮೀ ಪ್ರಯಾಣಿಸಿ ಭಾರತಕ್ಕೆ ಮರಳಿ ಬಂದ ಹದ್ದು

Share

ಮಧ್ಯ ಪ್ರದೇಶದ ರಾಜ್ಯದ ವಿದಿಶಾ ಮತ್ತು ರೈಸೇನ್‌ನಿಂದ ಬಿಡುಗಡೆಯಾದ ರಣಹದ್ದು ಎಂಟು ತಿಂಗಳ ನಂತರ ಭಾರತಕ್ಕೆ ಮರಳಿದ್ದು, ಈ ಪಕ್ಷಿ 15,000 ಕಿಲೋಮೀಟರ್ ಪ್ರಯಾಣಿಸಿದೆ. ಅರಣ್ಯ ಇಲಾಖೆಯು ರಣಹದ್ದಿಗೆ ಉಪಗ್ರಹ ರೇಡಿಯೋ ಕಾಲರ್ ಅಳವಡಿಸಿದ್ದು, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು.  ಈ ರಣಹದ್ದನ್ನು ಮಾರ್ಚ್ 29ರಂದು ವಿದಿಶಾ-ರೈಸೆನ್‍ನಲ್ಲಿರು ಹಲಾಲಿ ಅಣೆಕಟ್ಟಿನಲ್ಲಿ ಅರಣ್ಯ ಇಲಾಖೆಯು ಉಪಗ್ರಹ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಲಾಗಿದ್ದು, ಇದು ಎಂಟು ತಿಂಗಳ ನಂತರ ಅಂದರೆ ಸುಮಾರು 15,000 ಕಿಲೋಮೀಟರ್ ಪ್ರಯಾಣಿಸಿ ಇದೀಗ ಭಾರತಕ್ಕೆ ಮರಳಿದೆ.

ಹದ್ದು ತನ್ನ ಪ್ರಯಾಣದ ಸಮಯದಲ್ಲಿ ಪಾಕಿಸ್ತಾನ, ಅಫ್ಫಾನಿಸ್ತಾನ, ಉಜ್ಬೇಕಿಸ್ತಾನ್ ಮತ್ತು ಕಝಾಕಿಸ್ತಾನ್‍ಗೆ ಪ್ರಯಾಣಿಸಿದ್ದು, ಪ್ರಸ್ತುತ ಇದು ರಾಜಸ್ಥಾನದ ಧೋಲ್ಬುರ್ ಜಿಲ್ಲೆಯ ಬಳಿ ಇದೆ ಎಂದು ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಹಲಾಲಿ ಅಣೆಕಟ್ಟಿನಿಂದ ಬಿಡುಗಡೆಯಾದ ಒಂದು ತಿಂಗಳೊಳಗೆ ರಣಹದ್ದು ಕಜಕಿಸ್ತಾನ್ ತಲುಪಿದೆ. ಮೇ ತಿಂಗಳಲ್ಲಿ ಕಜಕಿಸ್ತಾನ್‌ಗೆ ಬಂದ ನಂತರ ಅದು ನಾಲ್ಕು ತಿಂಗಳು ಅಲ್ಲೇ ಇತ್ತು. ನಂತರ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನ್ ಮೂಲಕ ಭಾರತಕ್ಕೆ ಮರಳಿದೆ. ರಣಹದ್ದು ಪ್ರಸ್ತುತ ರಾಜಸ್ಥಾನದ ಬಳಿಯ ಧೋಲ್ಪುರದಲ್ಲಿ ಬೀಡುಬಿಟ್ಟಿದೆ ಎಂದು ವಿದಿಶಾ ಡಿಎಫ್‌ಒ ಹೇಮಂತ್ ಯಾದವ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ

ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…

49 minutes ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

2 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

4 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

7 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

10 hours ago