MIRROR FOCUS

ಸಾಗರದೊಳಗೆ ಸಿಕ್ಕಿತು ಭೂಮಿ ತಂಪಾಗಿಸುವ ಪಾಚಿ | ಈ ಆಲ್ಗೆ ಕಂಡು ಹಿಡಿದ ವಿಜ್ಞಾನಿಗಳು ಏನು ಹೇಳ್ತಾರೆ..? | ಇದು ಭೂಮಿ ತಂಪಾಗಿಸುವುದಾದರೂ ಹೇಗೆ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಿನದಿಂದ ದಿನಕ್ಕೆ ಭೂಮಿ(Earth) ಕಾದ ಬಾಣಲೆಯಂತಾಗುತ್ತಿದೆ. ಇದಕ್ಕೆ ಕಾರಣ  ಹವಾಮಾನ ವೈಪರೀತ್ಯ(Climate Change). ಕಳೆದ ಮುಂಗಾರು ಕೈ ಕೊಟ್ಟ ಹಿನ್ನೆಲೆ  ಕಳೆದ ವರ್ಷವನ್ನು ಭೂಮಿಯ ಅತ್ಯಂತ ಶಾಖದ ವರ್ಷ ಎಂದು ಕೂಡ ದಾಖಲಾಗಿದೆ. ಪರಿಸರವನ್ನು ಕಾಪಾಡಿ, ಮರಗಳನ್ನು ಹೆಚ್ಚು ಹೆಚ್ಚು ನೆಡುವ ಕಾರ್ಯ ಆಗಬೇಕಿದೆ. ಹಾಗೆ  ಭೂಮಿಯನ್ನು ತಂಪಾಗಿಸುವ ನಿಟ್ಟಿನಲ್ಲಿ ಪರಿಹಾರದ ಕ್ರಮಗಳ ಕುರಿತು ಸಂಶೋಧಕರು ನಿರಂತರ ಸಂಶೋಧನಾ(Research) ಕಾರ್ಯಕ್ಕೆ ಮುಂದಾಗಿದ್ದಾರೆ. ಈ ನಡುವೆ ಭೂಮಿಯ ಹವಾಮಾನವನ್ನು ತಂಪು(cool Earths climate) ಮಾಡಲು ಸಹಾಯ ಮಾಡುವ ಹೊಸ ಪಾಚಿಯೊಂದನ್ನು(Algae) ಅಂತಾರಾಷ್ಟ್ರೀಯ ಸಂಶೋಧಕರ ತಂಡ ಪತ್ತೆ ಮಾಡಿದೆ.

Advertisement
Advertisement

ಸಾಗರದಾಳದಲ್ಲಿರುವ(ocean) ಈ ಆಲ್ಗೆಗಳು ಭೂಮಿಯ ಹವಾಮಾನವನ್ನು ತಂಪಾಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಇದು ಬೃಹತ್​ ಪ್ರಮಾಣದಲ್ಲಿ ಸಂಯುಕ್ತವನ್ನು ಉತ್ಪಾದಿಸುತ್ತಿದ್ದು, ಭೂಮಿ ತಂಪಾಗಿಸುವಲ್ಲಿ ಇದು ಪ್ರಮುಖ ಪಾತ್ರವನ್ನು ಹೊಂದಿದೆ ಎಂದಿದ್ದಾರೆ ವಿಜ್ಞಾನಿಗಳು. ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯ (ಯುಇಎ) ಮತ್ತು ಓಷನ್ ಯೂನಿವರ್ಸಿಟಿ ಆಫ್ ಚೀನಾದ ಸಂಶೋಧಕರ ತಂಡ ಈ ಅಧ್ಯಯನ ನಡೆಸಿದೆ. ಈ ಪಾಚಿಗಳು ರೂಪುಗೊಳ್ಳುವಾಗ ಪೆಲಾಗೋಫೈಸಿ ಪಾಚಿಗಳನ್ನು ಡೈಮಿಥೈಲ್ಸಲ್ಫೋನಿಯೋಪ್ರೊಪಿಯೋನೇಟ್ (ಡಿಎಂಎಸ್​ಪಿ) ಎಂಬ ಸಂಯುಕ್ತವನ್ನು ಹೆಚ್ಚಾಗಿ ಉತ್ತಾದಿಸುತ್ತದೆ. ಇದು ಭೂಮಿ ತಂಪಾಗಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ

ಭೂಮಿ ಮೇಲೆ ಪೆಲಗೊಪೂಸಿಯಾ ಎಂಬ ಪಾಚಿ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಆದರೆ, ಇವು ಡಿಎಂಎಸ್​ಪಿಯ ಪ್ರಮುಖ ಉತ್ಪಾದಕರು ಎಂದು ಹಿಂದೆ ತಿಳಿದಿರಲಿಲ್ಲ ಎಂದು ಯುಇಎ ಬಯೋಲಾಜಿಕಲ್ ಸೈನ್ಸಸ್‌ನ ಪ್ರೊಫೆಸರ್ ಜೊನಾಥನ್ ಟಾಡ್ ತಿಳಿಸಿದ್ದಾರೆ. ಈ ಆವಿಷ್ಕಾರವೂ ಉತ್ಸಾಹ ದಾಯಕವಾಗಿದ್ದು, ಡಿಎಂಎಸ್​ಪಿ ಹೇರಳವಾದ ಆಂಟಿಸ್ಟ್ರೆಸ್ ಸಂಯುಕ್ತವಾಗಿದೆ. ಇದು ಸೂಕ್ಷ್ಮಾಣುಜೀವಿಗಳಿಗೆ ಆಹಾರ ಮೂಲವಾಗಿದ್ದು, ಹವಾಮಾನ ತಂಪಾಗಿಸುವ ಅನಿಲಗಳ ಪ್ರಮುಖ ಮೂಲವಾಗಿದೆ. ಡಿಎಂಎಸ್​ಪಿ ಡಿಎಂಎಸ್​ ಎನ್ನುವ ಹವಾಮಾನದ ಸಕ್ರಿಯ ಅನಿಲದ ಮೂಲವಾಗಿದೆ. ಇದುನ್ನು ಕಡಲ ತೀರದ ವಾಸನೆ ಎಂದು ಕರೆಯಲಾಗುವುದು.

ಈ ಅಧ್ಯಯನವನ್ನು ನೇಚರ್ ಮೈಕ್ರೋಬಯಾಲಜಿಯಲ್ಲಿ ಪ್ರಕಟಿಸಲಾಗಿದೆ. ಡಿಎಂಎಸ್​ಪಿ ಉತ್ಪಾದಕತೆ ಮತ್ತು ಡಿಎಂಎಸ್​​ ಬಿಡುಗಡೆಯು ಊಹಿಸಿದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿದೆ. ಇದು ಜಾಗತಿಕ ಹವಾಮಾನ ನಿಯಂತ್ರಿಸುವಲ್ಲಿ ಸೂಕ್ಷ್ಮ ಜೀವಿಗಳ ಪಾತ್ರವನ್ನು ತಿಳಿಸಿದೆ. ಡಿಎಂಎಸ್​ ಆಕ್ಸಿಡೀಕರಣ ಉತ್ಪನ್ನಗಳು ಭೂಮಿಯಿಂದ ಸೂರ್ಯನ ಬೆಳಕನ್ನು ಪ್ರತಿಬಿಂಬಿಸುವ ಮೋಡಗಳನ್ನು ರೂಪಿಸಲು ಸಹಾಯ ಮಾಡುತ್ತದೆ. ಪರಿಣಾಮಕಾರಿಯಾಗಿ ಗ್ರಹವನ್ನು ತಂಪಾಗಿಸುತ್ತದೆ. ಈ ಅಲ್ಗೆಯ ನೈಸರ್ಗಿಕ ಪ್ರಕ್ರಿಯೆಯು ಭೂಮಿಯ ಹವಾಮಾನವನ್ನು ನಿಯಂತ್ರಿಸಲು ಅತ್ಯಗತ್ಯವಾಗಿದೆ. ಜಾಗತಿಕ ಸಲ್ಫರ್ ಚಕ್ರಕ್ಕೆ ಅವಶ್ಯವಾಗಿದೆ. ಸಾಗರಗಳಿಂದ ಸಲ್ಫರ್​ ಅನ್ನು ಭೂಮಿಗೆ ಹಿಂದಿರುಗಿಸುವ ಮುಖ್ಯ ಮಾರ್ಗವನ್ನು ಇದು ತಿಳಿಸುತ್ತದೆ.

Source : IANS

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

5 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

7 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

12 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

13 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

18 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

20 hours ago