Advertisement
MIRROR FOCUS

ಸಾಗರದೊಳಗೆ ಸಿಕ್ಕಿತು ಭೂಮಿ ತಂಪಾಗಿಸುವ ಪಾಚಿ | ಈ ಆಲ್ಗೆ ಕಂಡು ಹಿಡಿದ ವಿಜ್ಞಾನಿಗಳು ಏನು ಹೇಳ್ತಾರೆ..? | ಇದು ಭೂಮಿ ತಂಪಾಗಿಸುವುದಾದರೂ ಹೇಗೆ?

Share

ದಿನದಿಂದ ದಿನಕ್ಕೆ ಭೂಮಿ(Earth) ಕಾದ ಬಾಣಲೆಯಂತಾಗುತ್ತಿದೆ. ಇದಕ್ಕೆ ಕಾರಣ  ಹವಾಮಾನ ವೈಪರೀತ್ಯ(Climate Change). ಕಳೆದ ಮುಂಗಾರು ಕೈ ಕೊಟ್ಟ ಹಿನ್ನೆಲೆ  ಕಳೆದ ವರ್ಷವನ್ನು ಭೂಮಿಯ ಅತ್ಯಂತ ಶಾಖದ ವರ್ಷ ಎಂದು ಕೂಡ ದಾಖಲಾಗಿದೆ. ಪರಿಸರವನ್ನು ಕಾಪಾಡಿ, ಮರಗಳನ್ನು ಹೆಚ್ಚು ಹೆಚ್ಚು ನೆಡುವ ಕಾರ್ಯ ಆಗಬೇಕಿದೆ. ಹಾಗೆ  ಭೂಮಿಯನ್ನು ತಂಪಾಗಿಸುವ ನಿಟ್ಟಿನಲ್ಲಿ ಪರಿಹಾರದ ಕ್ರಮಗಳ ಕುರಿತು ಸಂಶೋಧಕರು ನಿರಂತರ ಸಂಶೋಧನಾ(Research) ಕಾರ್ಯಕ್ಕೆ ಮುಂದಾಗಿದ್ದಾರೆ. ಈ ನಡುವೆ ಭೂಮಿಯ ಹವಾಮಾನವನ್ನು ತಂಪು(cool Earths climate) ಮಾಡಲು ಸಹಾಯ ಮಾಡುವ ಹೊಸ ಪಾಚಿಯೊಂದನ್ನು(Algae) ಅಂತಾರಾಷ್ಟ್ರೀಯ ಸಂಶೋಧಕರ ತಂಡ ಪತ್ತೆ ಮಾಡಿದೆ.

Advertisement

ಸಾಗರದಾಳದಲ್ಲಿರುವ(ocean) ಈ ಆಲ್ಗೆಗಳು ಭೂಮಿಯ ಹವಾಮಾನವನ್ನು ತಂಪಾಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಇದು ಬೃಹತ್​ ಪ್ರಮಾಣದಲ್ಲಿ ಸಂಯುಕ್ತವನ್ನು ಉತ್ಪಾದಿಸುತ್ತಿದ್ದು, ಭೂಮಿ ತಂಪಾಗಿಸುವಲ್ಲಿ ಇದು ಪ್ರಮುಖ ಪಾತ್ರವನ್ನು ಹೊಂದಿದೆ ಎಂದಿದ್ದಾರೆ ವಿಜ್ಞಾನಿಗಳು. ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯ (ಯುಇಎ) ಮತ್ತು ಓಷನ್ ಯೂನಿವರ್ಸಿಟಿ ಆಫ್ ಚೀನಾದ ಸಂಶೋಧಕರ ತಂಡ ಈ ಅಧ್ಯಯನ ನಡೆಸಿದೆ. ಈ ಪಾಚಿಗಳು ರೂಪುಗೊಳ್ಳುವಾಗ ಪೆಲಾಗೋಫೈಸಿ ಪಾಚಿಗಳನ್ನು ಡೈಮಿಥೈಲ್ಸಲ್ಫೋನಿಯೋಪ್ರೊಪಿಯೋನೇಟ್ (ಡಿಎಂಎಸ್​ಪಿ) ಎಂಬ ಸಂಯುಕ್ತವನ್ನು ಹೆಚ್ಚಾಗಿ ಉತ್ತಾದಿಸುತ್ತದೆ. ಇದು ಭೂಮಿ ತಂಪಾಗಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ

ಭೂಮಿ ಮೇಲೆ ಪೆಲಗೊಪೂಸಿಯಾ ಎಂಬ ಪಾಚಿ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಆದರೆ, ಇವು ಡಿಎಂಎಸ್​ಪಿಯ ಪ್ರಮುಖ ಉತ್ಪಾದಕರು ಎಂದು ಹಿಂದೆ ತಿಳಿದಿರಲಿಲ್ಲ ಎಂದು ಯುಇಎ ಬಯೋಲಾಜಿಕಲ್ ಸೈನ್ಸಸ್‌ನ ಪ್ರೊಫೆಸರ್ ಜೊನಾಥನ್ ಟಾಡ್ ತಿಳಿಸಿದ್ದಾರೆ. ಈ ಆವಿಷ್ಕಾರವೂ ಉತ್ಸಾಹ ದಾಯಕವಾಗಿದ್ದು, ಡಿಎಂಎಸ್​ಪಿ ಹೇರಳವಾದ ಆಂಟಿಸ್ಟ್ರೆಸ್ ಸಂಯುಕ್ತವಾಗಿದೆ. ಇದು ಸೂಕ್ಷ್ಮಾಣುಜೀವಿಗಳಿಗೆ ಆಹಾರ ಮೂಲವಾಗಿದ್ದು, ಹವಾಮಾನ ತಂಪಾಗಿಸುವ ಅನಿಲಗಳ ಪ್ರಮುಖ ಮೂಲವಾಗಿದೆ. ಡಿಎಂಎಸ್​ಪಿ ಡಿಎಂಎಸ್​ ಎನ್ನುವ ಹವಾಮಾನದ ಸಕ್ರಿಯ ಅನಿಲದ ಮೂಲವಾಗಿದೆ. ಇದುನ್ನು ಕಡಲ ತೀರದ ವಾಸನೆ ಎಂದು ಕರೆಯಲಾಗುವುದು.

ಈ ಅಧ್ಯಯನವನ್ನು ನೇಚರ್ ಮೈಕ್ರೋಬಯಾಲಜಿಯಲ್ಲಿ ಪ್ರಕಟಿಸಲಾಗಿದೆ. ಡಿಎಂಎಸ್​ಪಿ ಉತ್ಪಾದಕತೆ ಮತ್ತು ಡಿಎಂಎಸ್​​ ಬಿಡುಗಡೆಯು ಊಹಿಸಿದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿದೆ. ಇದು ಜಾಗತಿಕ ಹವಾಮಾನ ನಿಯಂತ್ರಿಸುವಲ್ಲಿ ಸೂಕ್ಷ್ಮ ಜೀವಿಗಳ ಪಾತ್ರವನ್ನು ತಿಳಿಸಿದೆ. ಡಿಎಂಎಸ್​ ಆಕ್ಸಿಡೀಕರಣ ಉತ್ಪನ್ನಗಳು ಭೂಮಿಯಿಂದ ಸೂರ್ಯನ ಬೆಳಕನ್ನು ಪ್ರತಿಬಿಂಬಿಸುವ ಮೋಡಗಳನ್ನು ರೂಪಿಸಲು ಸಹಾಯ ಮಾಡುತ್ತದೆ. ಪರಿಣಾಮಕಾರಿಯಾಗಿ ಗ್ರಹವನ್ನು ತಂಪಾಗಿಸುತ್ತದೆ. ಈ ಅಲ್ಗೆಯ ನೈಸರ್ಗಿಕ ಪ್ರಕ್ರಿಯೆಯು ಭೂಮಿಯ ಹವಾಮಾನವನ್ನು ನಿಯಂತ್ರಿಸಲು ಅತ್ಯಗತ್ಯವಾಗಿದೆ. ಜಾಗತಿಕ ಸಲ್ಫರ್ ಚಕ್ರಕ್ಕೆ ಅವಶ್ಯವಾಗಿದೆ. ಸಾಗರಗಳಿಂದ ಸಲ್ಫರ್​ ಅನ್ನು ಭೂಮಿಗೆ ಹಿಂದಿರುಗಿಸುವ ಮುಖ್ಯ ಮಾರ್ಗವನ್ನು ಇದು ತಿಳಿಸುತ್ತದೆ.

Source : IANS

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

8 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

21 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

21 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

2 days ago