ದಿನದಿಂದ ದಿನಕ್ಕೆ ಭೂಮಿ(Earth) ಕಾದ ಬಾಣಲೆಯಂತಾಗುತ್ತಿದೆ. ಇದಕ್ಕೆ ಕಾರಣ ಹವಾಮಾನ ವೈಪರೀತ್ಯ(Climate Change). ಕಳೆದ ಮುಂಗಾರು ಕೈ ಕೊಟ್ಟ ಹಿನ್ನೆಲೆ ಕಳೆದ ವರ್ಷವನ್ನು ಭೂಮಿಯ ಅತ್ಯಂತ ಶಾಖದ ವರ್ಷ ಎಂದು ಕೂಡ ದಾಖಲಾಗಿದೆ. ಪರಿಸರವನ್ನು ಕಾಪಾಡಿ, ಮರಗಳನ್ನು ಹೆಚ್ಚು ಹೆಚ್ಚು ನೆಡುವ ಕಾರ್ಯ ಆಗಬೇಕಿದೆ. ಹಾಗೆ ಭೂಮಿಯನ್ನು ತಂಪಾಗಿಸುವ ನಿಟ್ಟಿನಲ್ಲಿ ಪರಿಹಾರದ ಕ್ರಮಗಳ ಕುರಿತು ಸಂಶೋಧಕರು ನಿರಂತರ ಸಂಶೋಧನಾ(Research) ಕಾರ್ಯಕ್ಕೆ ಮುಂದಾಗಿದ್ದಾರೆ. ಈ ನಡುವೆ ಭೂಮಿಯ ಹವಾಮಾನವನ್ನು ತಂಪು(cool Earths climate) ಮಾಡಲು ಸಹಾಯ ಮಾಡುವ ಹೊಸ ಪಾಚಿಯೊಂದನ್ನು(Algae) ಅಂತಾರಾಷ್ಟ್ರೀಯ ಸಂಶೋಧಕರ ತಂಡ ಪತ್ತೆ ಮಾಡಿದೆ.
ಸಾಗರದಾಳದಲ್ಲಿರುವ(ocean) ಈ ಆಲ್ಗೆಗಳು ಭೂಮಿಯ ಹವಾಮಾನವನ್ನು ತಂಪಾಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಇದು ಬೃಹತ್ ಪ್ರಮಾಣದಲ್ಲಿ ಸಂಯುಕ್ತವನ್ನು ಉತ್ಪಾದಿಸುತ್ತಿದ್ದು, ಭೂಮಿ ತಂಪಾಗಿಸುವಲ್ಲಿ ಇದು ಪ್ರಮುಖ ಪಾತ್ರವನ್ನು ಹೊಂದಿದೆ ಎಂದಿದ್ದಾರೆ ವಿಜ್ಞಾನಿಗಳು. ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯ (ಯುಇಎ) ಮತ್ತು ಓಷನ್ ಯೂನಿವರ್ಸಿಟಿ ಆಫ್ ಚೀನಾದ ಸಂಶೋಧಕರ ತಂಡ ಈ ಅಧ್ಯಯನ ನಡೆಸಿದೆ. ಈ ಪಾಚಿಗಳು ರೂಪುಗೊಳ್ಳುವಾಗ ಪೆಲಾಗೋಫೈಸಿ ಪಾಚಿಗಳನ್ನು ಡೈಮಿಥೈಲ್ಸಲ್ಫೋನಿಯೋಪ್ರೊಪಿಯೋನೇಟ್ (ಡಿಎಂಎಸ್ಪಿ) ಎಂಬ ಸಂಯುಕ್ತವನ್ನು ಹೆಚ್ಚಾಗಿ ಉತ್ತಾದಿಸುತ್ತದೆ. ಇದು ಭೂಮಿ ತಂಪಾಗಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ
ಭೂಮಿ ಮೇಲೆ ಪೆಲಗೊಪೂಸಿಯಾ ಎಂಬ ಪಾಚಿ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಆದರೆ, ಇವು ಡಿಎಂಎಸ್ಪಿಯ ಪ್ರಮುಖ ಉತ್ಪಾದಕರು ಎಂದು ಹಿಂದೆ ತಿಳಿದಿರಲಿಲ್ಲ ಎಂದು ಯುಇಎ ಬಯೋಲಾಜಿಕಲ್ ಸೈನ್ಸಸ್ನ ಪ್ರೊಫೆಸರ್ ಜೊನಾಥನ್ ಟಾಡ್ ತಿಳಿಸಿದ್ದಾರೆ. ಈ ಆವಿಷ್ಕಾರವೂ ಉತ್ಸಾಹ ದಾಯಕವಾಗಿದ್ದು, ಡಿಎಂಎಸ್ಪಿ ಹೇರಳವಾದ ಆಂಟಿಸ್ಟ್ರೆಸ್ ಸಂಯುಕ್ತವಾಗಿದೆ. ಇದು ಸೂಕ್ಷ್ಮಾಣುಜೀವಿಗಳಿಗೆ ಆಹಾರ ಮೂಲವಾಗಿದ್ದು, ಹವಾಮಾನ ತಂಪಾಗಿಸುವ ಅನಿಲಗಳ ಪ್ರಮುಖ ಮೂಲವಾಗಿದೆ. ಡಿಎಂಎಸ್ಪಿ ಡಿಎಂಎಸ್ ಎನ್ನುವ ಹವಾಮಾನದ ಸಕ್ರಿಯ ಅನಿಲದ ಮೂಲವಾಗಿದೆ. ಇದುನ್ನು ಕಡಲ ತೀರದ ವಾಸನೆ ಎಂದು ಕರೆಯಲಾಗುವುದು.
ಈ ಅಧ್ಯಯನವನ್ನು ನೇಚರ್ ಮೈಕ್ರೋಬಯಾಲಜಿಯಲ್ಲಿ ಪ್ರಕಟಿಸಲಾಗಿದೆ. ಡಿಎಂಎಸ್ಪಿ ಉತ್ಪಾದಕತೆ ಮತ್ತು ಡಿಎಂಎಸ್ ಬಿಡುಗಡೆಯು ಊಹಿಸಿದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿದೆ. ಇದು ಜಾಗತಿಕ ಹವಾಮಾನ ನಿಯಂತ್ರಿಸುವಲ್ಲಿ ಸೂಕ್ಷ್ಮ ಜೀವಿಗಳ ಪಾತ್ರವನ್ನು ತಿಳಿಸಿದೆ. ಡಿಎಂಎಸ್ ಆಕ್ಸಿಡೀಕರಣ ಉತ್ಪನ್ನಗಳು ಭೂಮಿಯಿಂದ ಸೂರ್ಯನ ಬೆಳಕನ್ನು ಪ್ರತಿಬಿಂಬಿಸುವ ಮೋಡಗಳನ್ನು ರೂಪಿಸಲು ಸಹಾಯ ಮಾಡುತ್ತದೆ. ಪರಿಣಾಮಕಾರಿಯಾಗಿ ಗ್ರಹವನ್ನು ತಂಪಾಗಿಸುತ್ತದೆ. ಈ ಅಲ್ಗೆಯ ನೈಸರ್ಗಿಕ ಪ್ರಕ್ರಿಯೆಯು ಭೂಮಿಯ ಹವಾಮಾನವನ್ನು ನಿಯಂತ್ರಿಸಲು ಅತ್ಯಗತ್ಯವಾಗಿದೆ. ಜಾಗತಿಕ ಸಲ್ಫರ್ ಚಕ್ರಕ್ಕೆ ಅವಶ್ಯವಾಗಿದೆ. ಸಾಗರಗಳಿಂದ ಸಲ್ಫರ್ ಅನ್ನು ಭೂಮಿಗೆ ಹಿಂದಿರುಗಿಸುವ ಮುಖ್ಯ ಮಾರ್ಗವನ್ನು ಇದು ತಿಳಿಸುತ್ತದೆ.
Source : IANS
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…