ಸುಳ್ಯ | ಮತ್ತೆ ಕಂಪಿಸಿದ ಭೂಮಿ | ನಾಲ್ಕನೇ ಬಾರಿ ಕಂಪನ | ಹೆಚ್ಚುತ್ತಿರುವ ಪಶ್ಚಾತ್‌ ಕಂಪನಗಳು? |

July 1, 2022
6:52 AM

ಸುಳ್ಯ ತಾಲೂಕು ಹಾಗೂ ಕೊಡುಗು-ಸಂಪಾಜೆಯಲ್ಲಿ ಗುರುವಾರ ತಡರಾತ್ರಿ ಸುಮಾರು 1.15 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪನದ ಅನುಭವ ಹಲವರಿಗೆ ಆಗಿದೆ. ಚೆಂಬು, ಸಂಪಾಜೆಯಲ್ಲೂ ಈ ಅನುಭವವಾಗಿದ್ದು ಎರಡು ಸೆಕೆಂಡ್‌ ಗಳ ಕಾಲ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹಲವರು ಹೇಳಿದ್ದಾರೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

ಜೂ.25 ರಂದು ಮೊದಲ ಬಾರಿಗೆ ಬೆಳಗ್ಗೆ 9.10-9.15 ಸುಮಾರಿಗೆ  ಭೂಮಿ ಕಂಪಿಸಿತ್ತು, ಆ ಸಮಯದಲ್ಲಿ 2.3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು,  ಅದಾದ ನಂತರ ಜೂ.28 ರಂದು ಎರಡನೇ ಬಾರಿ ಬೆಳಗ್ಗೆ ಭೂಮಿ ಕಂಪಿಸಿದಾಗ 3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು, ಸಂಜೆ 1.8  ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು.  ಅದಾದ ಬಳಿಕ ಸಂಪಾಜೆ ಪ್ರದೇಶದಲ್ಲಿಯೇ ರಿಕ್ಟರ್‌ ಮಾಪಕ ಇಡಲಾಗಿದೆ. ಇದೀಗ ಜೂ.30 ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪನವಾಗಿದೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!
May 2, 2026
5:58 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ
May 2, 2026
5:42 PM
by: ಮಿರರ್‌ ಡೆಸ್ಕ್
ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ
May 2, 2026
5:35 PM
by: ಮಿರರ್‌ ಡೆಸ್ಕ್
ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
May 2, 2026
10:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror