Advertisement
MIRROR FOCUS

ಸುಳ್ಯ | ಮತ್ತೆ ಕಂಪಿಸಿದ ಭೂಮಿ | ನಾಲ್ಕನೇ ಬಾರಿ ಕಂಪನ | ಹೆಚ್ಚುತ್ತಿರುವ ಪಶ್ಚಾತ್‌ ಕಂಪನಗಳು? |

Share

ಸುಳ್ಯ ತಾಲೂಕು ಹಾಗೂ ಕೊಡುಗು-ಸಂಪಾಜೆಯಲ್ಲಿ ಗುರುವಾರ ತಡರಾತ್ರಿ ಸುಮಾರು 1.15 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪನದ ಅನುಭವ ಹಲವರಿಗೆ ಆಗಿದೆ. ಚೆಂಬು, ಸಂಪಾಜೆಯಲ್ಲೂ ಈ ಅನುಭವವಾಗಿದ್ದು ಎರಡು ಸೆಕೆಂಡ್‌ ಗಳ ಕಾಲ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹಲವರು ಹೇಳಿದ್ದಾರೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

ಜೂ.25 ರಂದು ಮೊದಲ ಬಾರಿಗೆ ಬೆಳಗ್ಗೆ 9.10-9.15 ಸುಮಾರಿಗೆ  ಭೂಮಿ ಕಂಪಿಸಿತ್ತು, ಆ ಸಮಯದಲ್ಲಿ 2.3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು,  ಅದಾದ ನಂತರ ಜೂ.28 ರಂದು ಎರಡನೇ ಬಾರಿ ಬೆಳಗ್ಗೆ ಭೂಮಿ ಕಂಪಿಸಿದಾಗ 3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು, ಸಂಜೆ 1.8  ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು.  ಅದಾದ ಬಳಿಕ ಸಂಪಾಜೆ ಪ್ರದೇಶದಲ್ಲಿಯೇ ರಿಕ್ಟರ್‌ ಮಾಪಕ ಇಡಲಾಗಿದೆ. ಇದೀಗ ಜೂ.30 ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪನವಾಗಿದೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

8 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

8 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

9 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

16 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

18 hours ago