ಸುಳ್ಯ ತಾಲೂಕು ಹಾಗೂ ಕೊಡುಗು-ಸಂಪಾಜೆಯಲ್ಲಿ ಗುರುವಾರ ತಡರಾತ್ರಿ ಸುಮಾರು 1.15 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪನದ ಅನುಭವ ಹಲವರಿಗೆ ಆಗಿದೆ. ಚೆಂಬು, ಸಂಪಾಜೆಯಲ್ಲೂ ಈ ಅನುಭವವಾಗಿದ್ದು ಎರಡು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹಲವರು ಹೇಳಿದ್ದಾರೆ. ಭೂಕಂಪನದ ನಂತರ ಪಶ್ಚಾತ್ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.
ಜೂ.25 ರಂದು ಮೊದಲ ಬಾರಿಗೆ ಬೆಳಗ್ಗೆ 9.10-9.15 ಸುಮಾರಿಗೆ ಭೂಮಿ ಕಂಪಿಸಿತ್ತು, ಆ ಸಮಯದಲ್ಲಿ 2.3 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು, ಅದಾದ ನಂತರ ಜೂ.28 ರಂದು ಎರಡನೇ ಬಾರಿ ಬೆಳಗ್ಗೆ ಭೂಮಿ ಕಂಪಿಸಿದಾಗ 3 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು, ಸಂಜೆ 1.8 ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು. ಅದಾದ ಬಳಿಕ ಸಂಪಾಜೆ ಪ್ರದೇಶದಲ್ಲಿಯೇ ರಿಕ್ಟರ್ ಮಾಪಕ ಇಡಲಾಗಿದೆ. ಇದೀಗ ಜೂ.30 ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪನವಾಗಿದೆ. ಭೂಕಂಪನದ ನಂತರ ಪಶ್ಚಾತ್ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…