Advertisement
MIRROR FOCUS

ಸುಳ್ಯ | ಮತ್ತೆ ಕಂಪಿಸಿದ ಭೂಮಿ | ನಾಲ್ಕನೇ ಬಾರಿ ಕಂಪನ | ಹೆಚ್ಚುತ್ತಿರುವ ಪಶ್ಚಾತ್‌ ಕಂಪನಗಳು? |

Share

ಸುಳ್ಯ ತಾಲೂಕು ಹಾಗೂ ಕೊಡುಗು-ಸಂಪಾಜೆಯಲ್ಲಿ ಗುರುವಾರ ತಡರಾತ್ರಿ ಸುಮಾರು 1.15 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪನದ ಅನುಭವ ಹಲವರಿಗೆ ಆಗಿದೆ. ಚೆಂಬು, ಸಂಪಾಜೆಯಲ್ಲೂ ಈ ಅನುಭವವಾಗಿದ್ದು ಎರಡು ಸೆಕೆಂಡ್‌ ಗಳ ಕಾಲ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹಲವರು ಹೇಳಿದ್ದಾರೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

ಜೂ.25 ರಂದು ಮೊದಲ ಬಾರಿಗೆ ಬೆಳಗ್ಗೆ 9.10-9.15 ಸುಮಾರಿಗೆ  ಭೂಮಿ ಕಂಪಿಸಿತ್ತು, ಆ ಸಮಯದಲ್ಲಿ 2.3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು,  ಅದಾದ ನಂತರ ಜೂ.28 ರಂದು ಎರಡನೇ ಬಾರಿ ಬೆಳಗ್ಗೆ ಭೂಮಿ ಕಂಪಿಸಿದಾಗ 3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು, ಸಂಜೆ 1.8  ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು.  ಅದಾದ ಬಳಿಕ ಸಂಪಾಜೆ ಪ್ರದೇಶದಲ್ಲಿಯೇ ರಿಕ್ಟರ್‌ ಮಾಪಕ ಇಡಲಾಗಿದೆ. ಇದೀಗ ಜೂ.30 ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪನವಾಗಿದೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 hour ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

2 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

10 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

15 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

15 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago